ಜನವಾಡ: ಸಿದ್ಧಾರೂಢ ಸ್ವಾಮೀಜಿ ಮೂರ್ತಿ ಪ್ರತಿಷ್ಠಾಪನೆಯ 15ನೇ ವಾರ್ಷಿಕೋತ್ಸವ ಹಾಗೂ ಸಚ್ಚಿದಾನಂದ ಸ್ವಾಮೀಜಿ ಅವರ 25ನೇ ಪುಣ್ಯಸ್ಮರಣೆ ನಿಮಿತ್ತ ಬೀದರ್ ತಾಲ್ಲೂಕಿನ ಬೆಳ್ಳೂರಿನಲ್ಲಿ ನಡೆದ ವಚನ ಗಾಯನ ಕಾರ್ಯಕ್ರಮ ಸಭಿಕರ ಮನ ರಂಜಿಸಿತು.
ಕಲಾವಿದ ಶಿವಶರಣಪ್ಪ ಕಮಠಾಣೆ ಹಾಗೂ ತಂಡದವರು ಸುಶ್ರಾವ್ಯವಾಗಿ ವಚನ ಗಾಯನ ಮಾಡಿ ಕರತಾಡನಕ್ಕೆ ಪಾತ್ರರಾದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.