<p><strong>ಬೀದರ್:</strong> ‘ಸಹಕಾರ ಕ್ಷೇತ್ರದಿಂದ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ’ ಎಂದು ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮದ ಅಧ್ಯಕ್ಷ ಗುರುನಾಥ ಜ್ಯಾಂತಿಕರ್ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಶಿವನಗರದಲ್ಲಿ ಕಲ್ಯಾಣ ಕರ್ನಾಟಕ ಲಿಂಗಾಯತ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಹಕಾರ ವಿಶಾಲ ಕ್ಷೇತ್ರವಾಗಿದೆ. ರೈತರು, ಕಾರ್ಮಿಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರೂ ಜತೆಗೂಡಿ ಕೆಲಸ ಮಾಡಿದ್ದಲ್ಲಿ ಸಮೃದ್ಧ ಸಮಾಜ ಕಟ್ಟಬಹುದಾಗಿದೆ’ ಎಂದು ತಿಳಿಸಿದರು.</p>.<p>ಗ್ರಾಮೀಣ ಕೈಗಾರಿಕೆಗಳ ಇಲಾಖೆ ಉಪ ನಿರ್ದೇಶಕ ರಮೇಶ ಮಠಪತಿ ಮಾತನಾಡಿ, ‘ಸಹಕಾರದ ಬೇರುಗಳು ಬಸವಣ್ಣನವರ ಕಾಯಕ- ದಾಸೋಹ ತತ್ವದಲ್ಲಿ ಅಡಗಿವೆ. ಎಲ್ಲರಿಗಾಗಿ ನಾನು, ಎಲ್ಲರೂ ನನಗಾಗಿ ಎನ್ನುವುದು ಸಹಕಾರದ ಮೂಲಮಂತ್ರ’ ಎಂದು ತಿಳಿಸಿದರು.<br /><br />ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಲಿಂಗಾಯತ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಮಾಣಿಕಪ್ಪ ಗೋರನಾಳೆ ಮಾತನಾಡಿ, ‘ಸಹಕಾರಿಯು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಲಿದೆ. ಜನಸಾಮಾನ್ಯರಿಗೆ ಹಲವು ರೀತಿಯಲ್ಲಿ ಉಪಕಾರಿಯಾಗಲಿದೆ’ ಎಂದು ತಿಳಿಸಿದರು.</p>.<p>ಸಾನ್ನಿಧ್ಯ ವಹಿಸಿದ್ದ ಬಸವಗಿರಿಯ ಲಿಂಗಾಯತ ಮಹಾಮಠದ ಪ್ರಭುದೇವರು ಮಾತನಾಡಿ, ‘ಸಮಾಜದಲ್ಲಿ ಎಲ್ಲರೂ ಸುಖವಾಗಿದ್ದರೆ ಮಾತ್ರ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವಿದೆ. ಹೊಸ ಸಹಕಾರ ಸಂಘ ಜನರ ನೆಮ್ಮದಿ ಬದುಕಿಗೆ ವೇದಿಕೆಯಾಗಲಿ’ ಎಂದು ಶುಭ ಹಾರೈಸಿದರು.</p>.<p>ಸಹಕಾರ ಇಲಾಖೆಯ ಬಿ.ಎಚ್. ಸಂಗಮ, ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ಬಸವರಾಜ ಶೇರಿಕಾರ ಉಪಸ್ಥಿತರಿದ್ದರು. ಸಹಕಾರಿಯ ನಿರ್ದೇಶಕ ಹಾವಯ್ಯ ಸ್ವಾಮಿ ನಿರೂಪಿಸಿದರು. ನಿರ್ದೇಶಕ ವೈಜಿನಾಥ ಹುಣಚಗೇರಿ ಸ್ವಾಗತಿಸಿದರು. ಬಸವಕಿರಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಸಹಕಾರ ಕ್ಷೇತ್ರದಿಂದ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ’ ಎಂದು ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮದ ಅಧ್ಯಕ್ಷ ಗುರುನಾಥ ಜ್ಯಾಂತಿಕರ್ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಶಿವನಗರದಲ್ಲಿ ಕಲ್ಯಾಣ ಕರ್ನಾಟಕ ಲಿಂಗಾಯತ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಹಕಾರ ವಿಶಾಲ ಕ್ಷೇತ್ರವಾಗಿದೆ. ರೈತರು, ಕಾರ್ಮಿಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರೂ ಜತೆಗೂಡಿ ಕೆಲಸ ಮಾಡಿದ್ದಲ್ಲಿ ಸಮೃದ್ಧ ಸಮಾಜ ಕಟ್ಟಬಹುದಾಗಿದೆ’ ಎಂದು ತಿಳಿಸಿದರು.</p>.<p>ಗ್ರಾಮೀಣ ಕೈಗಾರಿಕೆಗಳ ಇಲಾಖೆ ಉಪ ನಿರ್ದೇಶಕ ರಮೇಶ ಮಠಪತಿ ಮಾತನಾಡಿ, ‘ಸಹಕಾರದ ಬೇರುಗಳು ಬಸವಣ್ಣನವರ ಕಾಯಕ- ದಾಸೋಹ ತತ್ವದಲ್ಲಿ ಅಡಗಿವೆ. ಎಲ್ಲರಿಗಾಗಿ ನಾನು, ಎಲ್ಲರೂ ನನಗಾಗಿ ಎನ್ನುವುದು ಸಹಕಾರದ ಮೂಲಮಂತ್ರ’ ಎಂದು ತಿಳಿಸಿದರು.<br /><br />ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಲಿಂಗಾಯತ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಮಾಣಿಕಪ್ಪ ಗೋರನಾಳೆ ಮಾತನಾಡಿ, ‘ಸಹಕಾರಿಯು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಲಿದೆ. ಜನಸಾಮಾನ್ಯರಿಗೆ ಹಲವು ರೀತಿಯಲ್ಲಿ ಉಪಕಾರಿಯಾಗಲಿದೆ’ ಎಂದು ತಿಳಿಸಿದರು.</p>.<p>ಸಾನ್ನಿಧ್ಯ ವಹಿಸಿದ್ದ ಬಸವಗಿರಿಯ ಲಿಂಗಾಯತ ಮಹಾಮಠದ ಪ್ರಭುದೇವರು ಮಾತನಾಡಿ, ‘ಸಮಾಜದಲ್ಲಿ ಎಲ್ಲರೂ ಸುಖವಾಗಿದ್ದರೆ ಮಾತ್ರ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವಿದೆ. ಹೊಸ ಸಹಕಾರ ಸಂಘ ಜನರ ನೆಮ್ಮದಿ ಬದುಕಿಗೆ ವೇದಿಕೆಯಾಗಲಿ’ ಎಂದು ಶುಭ ಹಾರೈಸಿದರು.</p>.<p>ಸಹಕಾರ ಇಲಾಖೆಯ ಬಿ.ಎಚ್. ಸಂಗಮ, ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ಬಸವರಾಜ ಶೇರಿಕಾರ ಉಪಸ್ಥಿತರಿದ್ದರು. ಸಹಕಾರಿಯ ನಿರ್ದೇಶಕ ಹಾವಯ್ಯ ಸ್ವಾಮಿ ನಿರೂಪಿಸಿದರು. ನಿರ್ದೇಶಕ ವೈಜಿನಾಥ ಹುಣಚಗೇರಿ ಸ್ವಾಗತಿಸಿದರು. ಬಸವಕಿರಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>