ಗ್ರಾಮೀಣ ಕೈಗಾರಿಕೆಗಳ ಇಲಾಖೆ ಉಪ ನಿರ್ದೇಶಕ ರಮೇಶ ಮಠಪತಿ ಮಾತನಾಡಿ, ‘ಸಹಕಾರದ ಬೇರುಗಳು ಬಸವಣ್ಣನವರ ಕಾಯಕ- ದಾಸೋಹ ತತ್ವದಲ್ಲಿ ಅಡಗಿವೆ. ಎಲ್ಲರಿಗಾಗಿ ನಾನು, ಎಲ್ಲರೂ ನನಗಾಗಿ ಎನ್ನುವುದು ಸಹಕಾರದ ಮೂಲಮಂತ್ರ’ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಲಿಂಗಾಯತ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಮಾಣಿಕಪ್ಪ ಗೋರನಾಳೆ ಮಾತನಾಡಿ, ‘ಸಹಕಾರಿಯು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಲಿದೆ. ಜನಸಾಮಾನ್ಯರಿಗೆ ಹಲವು ರೀತಿಯಲ್ಲಿ ಉಪಕಾರಿಯಾಗಲಿದೆ’ ಎಂದು ತಿಳಿಸಿದರು.