<p><strong>ಮಾಮನಕೇರಿ(ಜನವಾಡ):</strong> ಬೀದರ್ ತಾಲ್ಲೂಕಿನ ಮಾಮನಕೇರಿ ಸಮೀಪದ ಜ್ಞಾನಸುಧಾ ವಿದ್ಯಾಲಯದಲ್ಲಿ ಶನಿವಾರ ನಡೆದ ಜಿಎಸ್ವಿ ಸರಿಗಮಪ ಸಂಗೀತ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಅನನ್ಯ ರಂಜೀತ್ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಯುಕ್ತಿ ಗೌತಮ ಅರಳಿ ಪ್ರಥಮ ಸ್ಥಾನ ಗಳಿಸಿದರು.</p>.<p>ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸನ್ನಿಧಿ ಆಕಾಶ್ ಪಾಟೀಲ ದ್ವಿತೀಯ, ಆಧ್ಯಾ ರಿತೇಶ್ ತೃತೀಯ ಸ್ಥಾನ ಗಳಿಸಿದರೆ, ಪ್ರೌಢಶಾಲೆ ವಿಭಾಗದಲ್ಲಿ ಚಿನ್ಮಯಿ ಅಲ್ಲಮಪ್ರಭು ದ್ವಿತೀಯ ಮತ್ತು ಸುಶ್ಮಿತಾ ಸುರೇಶ್ ತೃತೀಯ ಸ್ಥಾನ ಪಡೆದರು.</p>.<p>ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಕನ್ನಡ ಹಾಗೂ ಹಿಂದಿ ಹಾಡುಗಳನ್ನು ಸುಮಧುರವಾಗಿ ಹಾಡಿ ಎಲ್ಲರ ಮನ ಗೆದ್ದರು. <br /> ‘ಹುಟ್ಟೋದ್ಯಾಕೆ ಸಾಯೋದ್ಯಾಕೆ ಏನಾದರು ಸಾಧಿಸಿ ಹೋಗೋಕೆ;, ‘ಕರುನಾಡತಾಯಿ ಸದಾ ಚಿನ್ಮಯಿ, ಈ ಪುಣ್ಯ ಭೂಮಿ ನಮ್ಮ ದೇವಾಲಯ’, ‘ದಿಲ್ ದಿಯಾ ಹೈ ಜಾನ್ ಭಿ ದೆಂಗೆ...’ ಗೀತೆಗಳನ್ನು 50ಕ್ಕೂ ಅಧಿಕ ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಾಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.</p>.<p>ಮಾನಸಿಕ ಒತ್ತಡ ನಿವಾರಣೆಗೆ ಸಂಗೀತ ಹಾಗೂ ಯೋಗ ಸಹಕಾರಿಯಾಗಿವೆ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಹೇಳಿದರು.</p>.<p>ವಿದ್ಯಾರ್ಥಿಗಳ ಸಂಗೀತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಎಂಟು ವರ್ಷಗಳಿಂದ ಸ್ಪರ್ಧೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ ತಿಳಿಸಿದರು.</p>.<p>ಹುಬ್ಬಳ್ಳಿಯ ಗಾಯಕ ಸುಧೀಂದ್ರ ವಿ. ಪದಕಿ, ಹುಮನಾಬಾದ್ನ ಸುಗೌಂಕರ್ ಅಜಯ ಪಂಡಿತರಾವ್ ತೀರ್ಪುಗಾರರಾಗಿದ್ದರು. ಪೂಜಾ ಜಾರ್ಜ್ ಸ್ಯಾಮುವೆಲ್, ಪ್ರಾಚಾರ್ಯೆ ಸುನೀತಾ ಸ್ವಾಮಿ, ಉಪ ಪ್ರಾಚಾರ್ಯೆ ಕಲ್ಪನಾ ಮೋದಿ, ಮೇಲ್ವಿಚಾರಕಿ ರಜನಿ ಮೈಲೂರಕರ್, ಸಾಯಿಗೀತಾ ಪಾಟೀಲ ಇದ್ದರು.</p>.<p>ವಿಶ್ವ ಸಂಗೀತ ದಿನಾಚರಣೆ ಪ್ರಯುಕ್ತ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಮನಕೇರಿ(ಜನವಾಡ):</strong> ಬೀದರ್ ತಾಲ್ಲೂಕಿನ ಮಾಮನಕೇರಿ ಸಮೀಪದ ಜ್ಞಾನಸುಧಾ ವಿದ್ಯಾಲಯದಲ್ಲಿ ಶನಿವಾರ ನಡೆದ ಜಿಎಸ್ವಿ ಸರಿಗಮಪ ಸಂಗೀತ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಅನನ್ಯ ರಂಜೀತ್ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಯುಕ್ತಿ ಗೌತಮ ಅರಳಿ ಪ್ರಥಮ ಸ್ಥಾನ ಗಳಿಸಿದರು.</p>.<p>ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸನ್ನಿಧಿ ಆಕಾಶ್ ಪಾಟೀಲ ದ್ವಿತೀಯ, ಆಧ್ಯಾ ರಿತೇಶ್ ತೃತೀಯ ಸ್ಥಾನ ಗಳಿಸಿದರೆ, ಪ್ರೌಢಶಾಲೆ ವಿಭಾಗದಲ್ಲಿ ಚಿನ್ಮಯಿ ಅಲ್ಲಮಪ್ರಭು ದ್ವಿತೀಯ ಮತ್ತು ಸುಶ್ಮಿತಾ ಸುರೇಶ್ ತೃತೀಯ ಸ್ಥಾನ ಪಡೆದರು.</p>.<p>ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಕನ್ನಡ ಹಾಗೂ ಹಿಂದಿ ಹಾಡುಗಳನ್ನು ಸುಮಧುರವಾಗಿ ಹಾಡಿ ಎಲ್ಲರ ಮನ ಗೆದ್ದರು. <br /> ‘ಹುಟ್ಟೋದ್ಯಾಕೆ ಸಾಯೋದ್ಯಾಕೆ ಏನಾದರು ಸಾಧಿಸಿ ಹೋಗೋಕೆ;, ‘ಕರುನಾಡತಾಯಿ ಸದಾ ಚಿನ್ಮಯಿ, ಈ ಪುಣ್ಯ ಭೂಮಿ ನಮ್ಮ ದೇವಾಲಯ’, ‘ದಿಲ್ ದಿಯಾ ಹೈ ಜಾನ್ ಭಿ ದೆಂಗೆ...’ ಗೀತೆಗಳನ್ನು 50ಕ್ಕೂ ಅಧಿಕ ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಾಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.</p>.<p>ಮಾನಸಿಕ ಒತ್ತಡ ನಿವಾರಣೆಗೆ ಸಂಗೀತ ಹಾಗೂ ಯೋಗ ಸಹಕಾರಿಯಾಗಿವೆ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಹೇಳಿದರು.</p>.<p>ವಿದ್ಯಾರ್ಥಿಗಳ ಸಂಗೀತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಎಂಟು ವರ್ಷಗಳಿಂದ ಸ್ಪರ್ಧೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ ತಿಳಿಸಿದರು.</p>.<p>ಹುಬ್ಬಳ್ಳಿಯ ಗಾಯಕ ಸುಧೀಂದ್ರ ವಿ. ಪದಕಿ, ಹುಮನಾಬಾದ್ನ ಸುಗೌಂಕರ್ ಅಜಯ ಪಂಡಿತರಾವ್ ತೀರ್ಪುಗಾರರಾಗಿದ್ದರು. ಪೂಜಾ ಜಾರ್ಜ್ ಸ್ಯಾಮುವೆಲ್, ಪ್ರಾಚಾರ್ಯೆ ಸುನೀತಾ ಸ್ವಾಮಿ, ಉಪ ಪ್ರಾಚಾರ್ಯೆ ಕಲ್ಪನಾ ಮೋದಿ, ಮೇಲ್ವಿಚಾರಕಿ ರಜನಿ ಮೈಲೂರಕರ್, ಸಾಯಿಗೀತಾ ಪಾಟೀಲ ಇದ್ದರು.</p>.<p>ವಿಶ್ವ ಸಂಗೀತ ದಿನಾಚರಣೆ ಪ್ರಯುಕ್ತ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>