<p>ಬೀದರ್: ಪ್ರಾಚೀನ ಕಲೆಗಳನ್ನು ಸಂರಕ್ಷಿಸುವುದು ಅಗತ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ರಾಜು ಪಾಯದ್ ಹೇಳಿದರು.<br />ಇಲ್ಲಿಯ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಾಚ್ಯ ಪ್ರಜ್ಞೆ ಕುರಿತ ಜಿಲ್ಲಾಮಟ್ಟದ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br />ಪ್ರಾಚೀನ ಕಲೆ ಹಾಗೂ ವಾಸ್ತು ಶಿಲ್ಪ ನಮ್ಮ ಶ್ರೇಷ್ಠ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ತಿಳಿಸಿದರು.<br />ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ವಿಷ್ಣುಕಾಂತ ಠಾಕೂರ್, ಸಂಜಪ್ಪ ಮಾನೂರೆ, ಶ್ರೀದೇವಿ ವಿ. ಪಾಟೀಲ ಇದ್ದರು. ಉಮೇಶ ಬಿರಾದಾರ ಸ್ವಾಗತಿಸಿದರು. ಬಲಭೀಮ ಕುಲಕರ್ಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಪ್ರಾಚೀನ ಕಲೆಗಳನ್ನು ಸಂರಕ್ಷಿಸುವುದು ಅಗತ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ರಾಜು ಪಾಯದ್ ಹೇಳಿದರು.<br />ಇಲ್ಲಿಯ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಾಚ್ಯ ಪ್ರಜ್ಞೆ ಕುರಿತ ಜಿಲ್ಲಾಮಟ್ಟದ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br />ಪ್ರಾಚೀನ ಕಲೆ ಹಾಗೂ ವಾಸ್ತು ಶಿಲ್ಪ ನಮ್ಮ ಶ್ರೇಷ್ಠ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ತಿಳಿಸಿದರು.<br />ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ವಿಷ್ಣುಕಾಂತ ಠಾಕೂರ್, ಸಂಜಪ್ಪ ಮಾನೂರೆ, ಶ್ರೀದೇವಿ ವಿ. ಪಾಟೀಲ ಇದ್ದರು. ಉಮೇಶ ಬಿರಾದಾರ ಸ್ವಾಗತಿಸಿದರು. ಬಲಭೀಮ ಕುಲಕರ್ಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>