ಇದರಲ್ಲಿ ಐತಿಹಾಸಿಕ ಕಲ್ಯಾಣಿಗಳ ಪುನಃಶ್ಚೇತನ ಮುಖ್ಯವಾಗಿದೆ. ನಂತರ ಹುಲಸೂರ ಪಟ್ಟಣದಲ್ಲಿಯ ಕಲ್ಯಾಣಿಯ ಅಭಿವೃದ್ಧಿ ಕಾರ್ಯ ಆರಂಭಿಸಲಾಗುವುದು. ಇದರಿಂದ ಅಂತರ್ಜಲ ಮಟ್ಟ ಹಾಗೂ ಗ್ರಾಮದ ಸೌಂದರ್ಯವೂ ಹೆಚ್ಚಲಿದೆ ಎಂದು ಹೇಳಿದರು. ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಜಯಪ್ರಕಾಶ ಚವಾಣ್ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಾರುದ್ರಪ್ಪ ಭರಮಶೆಟ್ಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಭಾಜಿರಾವ ಮೂಳೆ, ತಾ.ಪಂ ನರೇಗಾ ಐಇಸಿ ಸಂಯೋಜಕ ಗಣಪತಿ ಹರಕೂಡೆ, ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ಹಾಗೂ ಗ್ರಾ.ಪಂ, ಸದಸ್ಯರು ಇದ್ದರು.