<p><strong>ಔರಾದ್:</strong> ‘ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕದಲ್ಲಿ ಆಗಿರುವ ವಂಚನೆ ಸರಿಪಡಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.</p>.<p>ಸಮಿತಿಯ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ, ತಾಲ್ಲೂಕು ಸಂಚಾಲಕ ಸಂಜೀವಕುಮಾರ ಲಾಧಾ, ಧನರಾಜ ಶರ್ಮಾ ಅವರು ಗುರುವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಿಗೆ ಮನವಿಪತ್ರ ಸಲ್ಲಿಸಿದರು.</p>.<p>‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿ ಮಾಡಿಕೊಳ್ಳಲು ಜನವರಿ 2024ರಲ್ಲಿ ಆನ್ಲೈನ್ ಅರ್ಜಿ ಕರೆದಿದ್ದಾರೆ. ಈ ನೇಮಕಾತಿಯಲ್ಲಿ ತಾಂಡಾಗಳಲ್ಲಿರುವ ಅಂಗನವಾಡಿಗಳಿಗೆ ಮಾತ್ರ ಅರ್ಜಿ ಕರೆದಿದ್ದಾರೆ. ಇದರಿಂದ ಪರಿಶಿಷ್ಟ ಜಾತಿಯ ಬಲ ಹಾಗೂ ಎಡ ಸಮುದಾಯಗಳಗೆ ವಂಚನೆಯಾಗಿದೆ. ಹೀಗಾಗಿ ಈ ನೇಮಕಾತಿ ರದ್ದು ಮಾಡಬೇಕು. ಹೊಸದಾಗಿ ಆದೇಶ ಹೊರಡಿಸಿ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯ ಜನರಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ‘ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕದಲ್ಲಿ ಆಗಿರುವ ವಂಚನೆ ಸರಿಪಡಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.</p>.<p>ಸಮಿತಿಯ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ, ತಾಲ್ಲೂಕು ಸಂಚಾಲಕ ಸಂಜೀವಕುಮಾರ ಲಾಧಾ, ಧನರಾಜ ಶರ್ಮಾ ಅವರು ಗುರುವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಿಗೆ ಮನವಿಪತ್ರ ಸಲ್ಲಿಸಿದರು.</p>.<p>‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿ ಮಾಡಿಕೊಳ್ಳಲು ಜನವರಿ 2024ರಲ್ಲಿ ಆನ್ಲೈನ್ ಅರ್ಜಿ ಕರೆದಿದ್ದಾರೆ. ಈ ನೇಮಕಾತಿಯಲ್ಲಿ ತಾಂಡಾಗಳಲ್ಲಿರುವ ಅಂಗನವಾಡಿಗಳಿಗೆ ಮಾತ್ರ ಅರ್ಜಿ ಕರೆದಿದ್ದಾರೆ. ಇದರಿಂದ ಪರಿಶಿಷ್ಟ ಜಾತಿಯ ಬಲ ಹಾಗೂ ಎಡ ಸಮುದಾಯಗಳಗೆ ವಂಚನೆಯಾಗಿದೆ. ಹೀಗಾಗಿ ಈ ನೇಮಕಾತಿ ರದ್ದು ಮಾಡಬೇಕು. ಹೊಸದಾಗಿ ಆದೇಶ ಹೊರಡಿಸಿ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯ ಜನರಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>