<p><strong>ಬೀದರ್: </strong>ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಕರ್ನಾಟಕ-ತೆಲಂಗಾಣ ಗಡಿಯ ಜಹೀರಾಬಾದ್ ರಸ್ತೆಯಲ್ಲಿ ಇರುವ ಸಾಯಿ ಧಾಮ ರೆಸ್ಟೊರಂಟ್ ಬಳಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.</p>.<p>ಹರಕೆ ತೀರಿಸಲು ರೇಜಂತಲ್ ಗಣೇಶ ಮಂದಿರಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣದ ಭಕ್ತರಿಗೆ ಬಳಗದ ಸದಸ್ಯರು ಅನ್ನ ಪ್ರಸಾದ, ಬಾಳೆ ಹಣ್ಣು, ಬಿಸ್ಕತ್, ಹಾಲು ಹಾಗೂ ಕುಡಿಯುವ ನೀರಿನ ಬಾಟಲಿಗಳನ್ನು ನೀಡಿದರು.</p>.<p>ಬಳಗವು ಪ್ರತಿ ವರ್ಷ ರೇಜಂತಲ್ ಗಣೇಶ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡುತ್ತ ಬಂದಿದೆ. ಈ ಬಾರಿ ಕೋವಿಡ್ ನಿಯಂತ್ರಣಕ್ಕೆ ಬಂದ ಕಾರಣ ಸಂಕಷ್ಟ ವಿಮೋಚಕನ ಮಂದಿರಕ್ಕೆ ತೆರಳುವ ಭಕ್ತರ ಸಂಖ್ಯೆ ಅಧಿಕವಾಗಿದೆ ಎಂದು ಜಿಲ್ಲೆಯವರೇ ಆದ ಚಿತ್ರನಟ ಹಣ್ಮು ಪಾಜಿ ನುಡಿದರು.</p>.<p>ನೂರಾರು ಭಕ್ತರು ಪ್ರಸಾದ ಸ್ವೀಕರಿಸಿದ್ದಾರೆ. ಅನೇಕರು ಬಳಗದಿಂದ ಹಾಕಿದ್ದ ಟೆಂಟ್ನಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಭಕ್ತರ ಸೇವೆ ಮಾಡಿದ ಬಳಗದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.</p>.<p>ಬಳಗದ ಸದಸ್ಯರಾದ ನಾಮದೇವ, ಸಂಗಮೇಶ, ನರಸಿಂಗ್, ರಾಕೇಶ, ವಿಕ್ಕಿ ಅಭಿಷೇಕ, ಪಂಡಿತ, ಅನಿಲ್ ಸೋಳಂಕೆ, ಮಲ್ಲು ಗುಂಪಾ, ರಾಹುಲ್, ಅಂಬು ಶಹಾಪುರ, ಕೃಷ್ಣ, ಪವನ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಕರ್ನಾಟಕ-ತೆಲಂಗಾಣ ಗಡಿಯ ಜಹೀರಾಬಾದ್ ರಸ್ತೆಯಲ್ಲಿ ಇರುವ ಸಾಯಿ ಧಾಮ ರೆಸ್ಟೊರಂಟ್ ಬಳಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.</p>.<p>ಹರಕೆ ತೀರಿಸಲು ರೇಜಂತಲ್ ಗಣೇಶ ಮಂದಿರಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣದ ಭಕ್ತರಿಗೆ ಬಳಗದ ಸದಸ್ಯರು ಅನ್ನ ಪ್ರಸಾದ, ಬಾಳೆ ಹಣ್ಣು, ಬಿಸ್ಕತ್, ಹಾಲು ಹಾಗೂ ಕುಡಿಯುವ ನೀರಿನ ಬಾಟಲಿಗಳನ್ನು ನೀಡಿದರು.</p>.<p>ಬಳಗವು ಪ್ರತಿ ವರ್ಷ ರೇಜಂತಲ್ ಗಣೇಶ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡುತ್ತ ಬಂದಿದೆ. ಈ ಬಾರಿ ಕೋವಿಡ್ ನಿಯಂತ್ರಣಕ್ಕೆ ಬಂದ ಕಾರಣ ಸಂಕಷ್ಟ ವಿಮೋಚಕನ ಮಂದಿರಕ್ಕೆ ತೆರಳುವ ಭಕ್ತರ ಸಂಖ್ಯೆ ಅಧಿಕವಾಗಿದೆ ಎಂದು ಜಿಲ್ಲೆಯವರೇ ಆದ ಚಿತ್ರನಟ ಹಣ್ಮು ಪಾಜಿ ನುಡಿದರು.</p>.<p>ನೂರಾರು ಭಕ್ತರು ಪ್ರಸಾದ ಸ್ವೀಕರಿಸಿದ್ದಾರೆ. ಅನೇಕರು ಬಳಗದಿಂದ ಹಾಕಿದ್ದ ಟೆಂಟ್ನಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಭಕ್ತರ ಸೇವೆ ಮಾಡಿದ ಬಳಗದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.</p>.<p>ಬಳಗದ ಸದಸ್ಯರಾದ ನಾಮದೇವ, ಸಂಗಮೇಶ, ನರಸಿಂಗ್, ರಾಕೇಶ, ವಿಕ್ಕಿ ಅಭಿಷೇಕ, ಪಂಡಿತ, ಅನಿಲ್ ಸೋಳಂಕೆ, ಮಲ್ಲು ಗುಂಪಾ, ರಾಹುಲ್, ಅಂಬು ಶಹಾಪುರ, ಕೃಷ್ಣ, ಪವನ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>