<p><strong>ಔರಾದ್</strong>: ‘ಪರಿಸರ ಸಂರಕ್ಷಣೆ ಜತೆಗೆ ಪ್ರಾಣಿ, ಪಕ್ಷಿಗಳ ರಕ್ಷಣೆಯೂ ಅಗತ್ಯ’ ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು.</p>.<p>ತಾಲ್ಲೂಕಿನ ಸಂತಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈಚೆಗೆ ನಿಸರ್ಗ ಇಕೋ ಕ್ಲಬ್ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪರಿಸರ ಅಸಮತೋಲನದಿಂದ ಭೂತಾಪಮಾನ ಹೆಚ್ಚಳವಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ. ಭೂ ತಾಪಮಾನ ಹೆಚ್ಚಳದಿಂದ ಜೀವ ವೈವಿಧ್ಯತೆ ಮೇಲೆ ಪರಿಣಾಮ ಬೀರುತ್ತದೆ’ ಎಂದರು.</p>.<p>‘ಔರಾದ್ ತಾಲ್ಲೂಕು ಜಿಲ್ಲೆಯಲ್ಲಿಯೇ ಅತಿ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ತಾಲ್ಲೂಕಾಗಿದೆ. ಹೀಗಾಗಿ ಇಲ್ಲಿ ಹೆಚ್ಚು ಅರಣ್ಯ ಬೆಳೆಸುವ ಕೆಲಸ ಆಗಬೇಕು’ ಎಂದರು.</p>.<p>ಶಿಕ್ಷಕ ಉಮಕಾಂತ ಚೋಪಡೆ ಅಧ್ಯಕ್ಷತೆ ವಹಿಸಿ ಮಾತನಾಡಿ,‘ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಮನೆ ಅಂಗಳದಲ್ಲಿ ಕಡ್ಡಾಯವಾಗಿ ಸಸಿ ಬೆಳೆಸಿ ಪೋಷಿಸಬೇಕು’ ಎಂದು ಹೇಳಿದರು.</p>.<p>ಮುಖ್ಯಶಿಕ್ಷಕ ಅಜಯಕುಮಾರ ದುಬೆ, ವಿಜ್ಞಾನ ಶಿಕ್ಷಕ ಚಂದ್ರಕಾಂತ ಮಾತನಾಡಿದರು.</p>.<p>ಶಿಕ್ಷಕರಾದ ಶಿವಲಿಂಗ ಹೇಡೆ, ಸಂತೋಷ ಮುಕ್ರಂಬೆ, ಬಾಲಿಕಾ, ಆಶಾ, ಪೂರ್ಣಿಮಾ ಇದ್ದರು. ವಿದ್ಯಾರ್ಥಿನಿ ದೇವಿಕಾ ನಿರೂಪಿಸಿದರು. ಬೇಬಿ ಸ್ವಾಗತಿಸಿದರು. ಅಂಕಿತಾ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಔರಾದ್</strong>: ‘ಪರಿಸರ ಸಂರಕ್ಷಣೆ ಜತೆಗೆ ಪ್ರಾಣಿ, ಪಕ್ಷಿಗಳ ರಕ್ಷಣೆಯೂ ಅಗತ್ಯ’ ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು.</p>.<p>ತಾಲ್ಲೂಕಿನ ಸಂತಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈಚೆಗೆ ನಿಸರ್ಗ ಇಕೋ ಕ್ಲಬ್ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪರಿಸರ ಅಸಮತೋಲನದಿಂದ ಭೂತಾಪಮಾನ ಹೆಚ್ಚಳವಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ. ಭೂ ತಾಪಮಾನ ಹೆಚ್ಚಳದಿಂದ ಜೀವ ವೈವಿಧ್ಯತೆ ಮೇಲೆ ಪರಿಣಾಮ ಬೀರುತ್ತದೆ’ ಎಂದರು.</p>.<p>‘ಔರಾದ್ ತಾಲ್ಲೂಕು ಜಿಲ್ಲೆಯಲ್ಲಿಯೇ ಅತಿ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ತಾಲ್ಲೂಕಾಗಿದೆ. ಹೀಗಾಗಿ ಇಲ್ಲಿ ಹೆಚ್ಚು ಅರಣ್ಯ ಬೆಳೆಸುವ ಕೆಲಸ ಆಗಬೇಕು’ ಎಂದರು.</p>.<p>ಶಿಕ್ಷಕ ಉಮಕಾಂತ ಚೋಪಡೆ ಅಧ್ಯಕ್ಷತೆ ವಹಿಸಿ ಮಾತನಾಡಿ,‘ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಮನೆ ಅಂಗಳದಲ್ಲಿ ಕಡ್ಡಾಯವಾಗಿ ಸಸಿ ಬೆಳೆಸಿ ಪೋಷಿಸಬೇಕು’ ಎಂದು ಹೇಳಿದರು.</p>.<p>ಮುಖ್ಯಶಿಕ್ಷಕ ಅಜಯಕುಮಾರ ದುಬೆ, ವಿಜ್ಞಾನ ಶಿಕ್ಷಕ ಚಂದ್ರಕಾಂತ ಮಾತನಾಡಿದರು.</p>.<p>ಶಿಕ್ಷಕರಾದ ಶಿವಲಿಂಗ ಹೇಡೆ, ಸಂತೋಷ ಮುಕ್ರಂಬೆ, ಬಾಲಿಕಾ, ಆಶಾ, ಪೂರ್ಣಿಮಾ ಇದ್ದರು. ವಿದ್ಯಾರ್ಥಿನಿ ದೇವಿಕಾ ನಿರೂಪಿಸಿದರು. ಬೇಬಿ ಸ್ವಾಗತಿಸಿದರು. ಅಂಕಿತಾ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>