ಅರವಿಂದ ಜತ್ತಿ ಅವರು ಬಸವ ಸಮಿತಿ ಮೂಲಕ ಬಸವ ತತ್ವದ ಪ್ರಚಾರ, ಪ್ರಸಾರದಲ್ಲಿ ಮಹತ್ವದ ಕಾರ್ಯ ನಿರ್ವಹಿಸಿದ್ದಾರೆ. ವಚನ ಸಂಪುಟಗಳನ್ನು ವಿವಿಧ ಭಾಷೆಗಳಲ್ಲಿ ಪ್ರಕಟಿಸಿದ್ದಾರೆ.ಪ್ರಾಧ್ಯಾಪಕ ಡಾ.ಎನ್.ಜಿ. ಮಹಾದೇವಪ್ಪ ಅವರು ಲಿಂಗಾಯತ ತತ್ವಜ್ಞಾನಕ್ಕೆ ಸಂಬಂಧಿಸಿದ 27 ಪುಸ್ತಕಗಳನ್ನು ಬರೆದಿದ್ದಾರೆ. ಲಿಂಗಾಯತ ದರ್ಶನ ಮಾಸಪತ್ರಿಕೆಯ ಸಂಪಾದಕರಾಗಿದ್ದಾರೆ. ಈ ಸಾಧನೆ ಪರಿಗಣಿಸಿಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.