‘ಮಹಾತ್ಮ ಗಾಂಧೀಜಿ ಜಯಂತಿಯ ದಿನವೇ ತಹಶೀಲ್ದಾರ್ ಕಚೇರಿ ಎದುರಿನ ಆವರಣದಲ್ಲಿ ಕಣ್ಣಿಗೆ ಕಾಣುವಂತೆ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ, ಡಾ.ಬಿ.ಆರ್.ಅಂಬೇಡ್ಕರ್, ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರಗಳನ್ನು ಎಸೆಯಲಾಗಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರನ್ನು ಸ್ಥಳಕ್ಕೆ ಕರೆಸಿ ತೋರಿಸಲಾಗಿದೆ. ಈ ಕುರಿತು ದೂರು ದಾಖಲಿಸಲು ಹೇಳಲಾಗಿದ್ದು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ’ ಎಂದು ಸಹ ಮಲ್ಲಿಕಾರ್ಜುನ ಖೂಬಾ ಹೇಳಿದ್ದಾರೆ.