<p><strong>ಬೀದರ್</strong>: ‘ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.</p>.<p>ಭೂ ವಿವಾದದಿಂದಾಗಿ ಅನುಭವ ಮಂಟಪಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಕಾಮಗಾರಿ ನಡೆಸಲಾಗದೆ, ಬೇರೆ ಸ್ಥಳದಲ್ಲಿ ಕಾಮಗಾರಿ ಮಾಡಬೇಕಾಗಿ ಬಂದ ಕಾರಣದಿಂದಾಗಿ ಹಾಗೂ ಜಿಎಸ್ಟಿ ಶೇ 18ಕ್ಕೆ ಏರಿಕೆ ಆದ ಕಾರಣ ಯೋಜನಾ ವೆಚ್ಚ ₹612 ಕೋಟಿ ಬದಲಾಗಿ ₹742 ಕೋಟಿಗೆ ಹೆಚ್ಚಳವಾಗಿದೆ. ಅದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಪರಿಷ್ಕೃತ ಅಂದಾಜು ವೆಚ್ಚದಂತೆ ₹132 ಕೋಟಿ ಹೆಚ್ಚಳವಾಗಿದ್ದು, ಇದಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಮತ್ತು ಭೂಮಿ ನೀಡಿದ ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ್ದಾರೆ.</p>.<p>2026ರ ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿಸಲು ಕಾಮಗಾರಿಗೆ ವೇಗ ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.</p>.<p>ಭೂ ವಿವಾದದಿಂದಾಗಿ ಅನುಭವ ಮಂಟಪಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಕಾಮಗಾರಿ ನಡೆಸಲಾಗದೆ, ಬೇರೆ ಸ್ಥಳದಲ್ಲಿ ಕಾಮಗಾರಿ ಮಾಡಬೇಕಾಗಿ ಬಂದ ಕಾರಣದಿಂದಾಗಿ ಹಾಗೂ ಜಿಎಸ್ಟಿ ಶೇ 18ಕ್ಕೆ ಏರಿಕೆ ಆದ ಕಾರಣ ಯೋಜನಾ ವೆಚ್ಚ ₹612 ಕೋಟಿ ಬದಲಾಗಿ ₹742 ಕೋಟಿಗೆ ಹೆಚ್ಚಳವಾಗಿದೆ. ಅದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಪರಿಷ್ಕೃತ ಅಂದಾಜು ವೆಚ್ಚದಂತೆ ₹132 ಕೋಟಿ ಹೆಚ್ಚಳವಾಗಿದ್ದು, ಇದಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಮತ್ತು ಭೂಮಿ ನೀಡಿದ ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ್ದಾರೆ.</p>.<p>2026ರ ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿಸಲು ಕಾಮಗಾರಿಗೆ ವೇಗ ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>