ಅಕ್ಟೋಬರ್ 3 ರಂದು ನಗರದ ತೇರು ಮೈದಾನದಲ್ಲಿನ ಸಭಾಭವನದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರ ಸನ್ಮಾನ ಕಾರ್ಯಕ್ರಮ ನಡೆಯುವುದು. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಶ್ರಮಿಸಿದ ಕಾರ್ಯಕರ್ತರ ಅಭಿನಂದನೆ ನಡೆಯುವುದು. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಪ್ರಭು ಚವಾಣ್, ಮಾಜಿ ಶಾಸಕ ಎಂ.ಜಿ.ಮುಳೆ, ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಮಹಾರಾಷ್ಟ್ರದ ಶಾಸಕರಾದ ಅಭಿಮನ್ಯು ಪವಾರ ಔಸಾ, ಸಂಭಾಜಿ ಪಾಟೀಲ ನಿಲಂಗಾ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ತಾಲ್ಲೂಕಿನ ವಿವಿಧೆಡೆ ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಪೊಲೀಸರು ಅನವಶ್ಯಕವಾಗಿ ಕಾಟ ನೀಡುತ್ತಿರುವ ಬಗ್ಗೆ ಗೊತ್ತಾಗಿದ್ದು ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಸಂಬಂಧಿತ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದರು.