<p>ಬಸವಕಲ್ಯಾಣ: ‘ಮೇ ತಿಂಗಳಲ್ಲಿ ಅಕ್ಷಯ ತೃತೀಯದಂದು ಕೇಂದ್ರ ಸರ್ಕಾರದಿಂದ ಬಸವ ಜಯಂತಿ ಆಚರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ’ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಜಿ.ಕಿಶನ್ರೆಡ್ಡಿ ಹೇಳಿದರು.</p>.<p>ನಗರದಲ್ಲಿ ಶನಿವಾರ ನಡೆದ 43 ನೇ ಅನುಭವ ಮಂಟಪ ಉತ್ಸವ ಮತ್ತು ಶರಣ ಕಮ್ಮಟ ಉದ್ಘಾಟಿಸಿ ಮಾತನಾಡಿದರು.</p>.<p>‘ಜಗತ್ತಿನ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಯ ಅನುಭವ ಮಂಟಪದ ಬಗ್ಗೆಯೂ ಸಂಸ್ಕೃತಿ ಇಲಾಖೆಯಿಂದ ವ್ಯಾಪಕ ಪ್ರಚಾರಕ್ಕೆ ಪ್ರಯತ್ನಿಸಲಾಗುವುದು. ವಚನಗಳನ್ನು ರಚಿಸುವ ಮೂಲಕ ಮಹಾತ್ಮ ಬಸವೇಶ್ವರರು ಕಾಯಕ, ದಾಸೋಹ, ಸಮಾನತೆ ತತ್ವ ಸಾರಿದ್ದಾರೆ. ಪ್ರತ್ಯೇಕ ಲಿಂಗಾಯತ ಸಂಪ್ರದಾಯವನ್ನು ಆರಂಭಿಸಿದರು’ ಎಂದರು.</p>.<p>ಕೇಂದ್ರ ಸರ್ಕಾರ ರಾಮ ಜನ್ಮಭೂಮಿ, ಕಾಶಿ ದೇವಸ್ಥಾನದ ಜೀರ್ಣೋದ್ಧಾರ ಕೈಗೊಂಡಿದ್ದು ಈ ದೇಶದ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ಸತತವಾಗಿ ಶ್ರಮಿಸುತ್ತಿದೆ. ಮೋದಿಯವರು ಇಂಗ್ಲೆಂಡ್ನಲ್ಲಿನ ಬಸವ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವರು ಬಸವಣ್ಣನವರ ಅರ್ಥ ವ್ಯವಸ್ಥೆಯನ್ನು ಸ್ಮರಿಸಿ ಅವರನ್ನು ಗೌರವಿಸಿದ್ದಾರೆ ಎಂದರು.</p>.<p>ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿ,‘ಕಳಬೇಡ, ಕೊಲಬೇಡ ಎಂದು ಬರೀ ವಚನಗಳನ್ನು ಕಂಠಪಾಠ ಮಾಡಿದರೆ ಸಾಲದು, ಅದರಂತೆ ನಡೆಯಬೇಕು. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾಗಿ 9 ವರ್ಷಗಳಾಗಿದ್ದು, ಈ ಕಾಲದಲ್ಲಿ ಸಾಕಷ್ಟು ಪ್ರಗತಿ ಕಾರ್ಯಗಳನ್ನು ಕೈಗೊಂಡಿದ್ದಾರೆ’ ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ರಘುನಾಥ ಮಲ್ಕಾಪುರೆ, ಎಐಸಿಸಿ ಸದಸ್ಯ ಆನಂದ ದೇವಪ್ಪ, ಜಯವಿಭವಸ್ವಾಮಿ ಮೈಸೂರು, ಡಾ.ಜಗನ್ನಾಥ ಹೆಬ್ಬಾಳೆ ಮಾತನಾಡಿದರು.</p>.<p>ಉದ್ಯಮಿ ಗುರುನಾಥ ಕೊಳ್ಳೂರ್ ಅವರಿಗೆ ‘ದಾಸೋಹ ರತ್ನ ಪ್ರಶಸ್ತಿ’ ನೀಡಲಾಯಿತು. ಹಾರಕೂಡದ ಚನ್ನವೀರ ಶಿವಾಚಾರ್ಯರು, ಹುಲಸೂರಿನ ಶಿವಾನಂದ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಬಾಬು ವಾಲಿ, ಶಿವರಾಜ ನರಶೆಟ್ಟಿ, ಗುಂಡುರೆಡ್ಡಿ, ಪ್ರದೀಪ ವಾತಡೆ, ಡಾ.ಎಸ್.ಬಿ.ದುರ್ಗೆ ಇದ್ದರು.</p>.<p>ಇದಕ್ಕೂ ಮೊದಲು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಷಟಸ್ಥಲ್ ಧ್ವಜಾರೋಹಣಗೈದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ‘ಮೇ ತಿಂಗಳಲ್ಲಿ ಅಕ್ಷಯ ತೃತೀಯದಂದು ಕೇಂದ್ರ ಸರ್ಕಾರದಿಂದ ಬಸವ ಜಯಂತಿ ಆಚರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ’ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಜಿ.ಕಿಶನ್ರೆಡ್ಡಿ ಹೇಳಿದರು.</p>.<p>ನಗರದಲ್ಲಿ ಶನಿವಾರ ನಡೆದ 43 ನೇ ಅನುಭವ ಮಂಟಪ ಉತ್ಸವ ಮತ್ತು ಶರಣ ಕಮ್ಮಟ ಉದ್ಘಾಟಿಸಿ ಮಾತನಾಡಿದರು.</p>.<p>‘ಜಗತ್ತಿನ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಯ ಅನುಭವ ಮಂಟಪದ ಬಗ್ಗೆಯೂ ಸಂಸ್ಕೃತಿ ಇಲಾಖೆಯಿಂದ ವ್ಯಾಪಕ ಪ್ರಚಾರಕ್ಕೆ ಪ್ರಯತ್ನಿಸಲಾಗುವುದು. ವಚನಗಳನ್ನು ರಚಿಸುವ ಮೂಲಕ ಮಹಾತ್ಮ ಬಸವೇಶ್ವರರು ಕಾಯಕ, ದಾಸೋಹ, ಸಮಾನತೆ ತತ್ವ ಸಾರಿದ್ದಾರೆ. ಪ್ರತ್ಯೇಕ ಲಿಂಗಾಯತ ಸಂಪ್ರದಾಯವನ್ನು ಆರಂಭಿಸಿದರು’ ಎಂದರು.</p>.<p>ಕೇಂದ್ರ ಸರ್ಕಾರ ರಾಮ ಜನ್ಮಭೂಮಿ, ಕಾಶಿ ದೇವಸ್ಥಾನದ ಜೀರ್ಣೋದ್ಧಾರ ಕೈಗೊಂಡಿದ್ದು ಈ ದೇಶದ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ಸತತವಾಗಿ ಶ್ರಮಿಸುತ್ತಿದೆ. ಮೋದಿಯವರು ಇಂಗ್ಲೆಂಡ್ನಲ್ಲಿನ ಬಸವ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವರು ಬಸವಣ್ಣನವರ ಅರ್ಥ ವ್ಯವಸ್ಥೆಯನ್ನು ಸ್ಮರಿಸಿ ಅವರನ್ನು ಗೌರವಿಸಿದ್ದಾರೆ ಎಂದರು.</p>.<p>ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿ,‘ಕಳಬೇಡ, ಕೊಲಬೇಡ ಎಂದು ಬರೀ ವಚನಗಳನ್ನು ಕಂಠಪಾಠ ಮಾಡಿದರೆ ಸಾಲದು, ಅದರಂತೆ ನಡೆಯಬೇಕು. ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾಗಿ 9 ವರ್ಷಗಳಾಗಿದ್ದು, ಈ ಕಾಲದಲ್ಲಿ ಸಾಕಷ್ಟು ಪ್ರಗತಿ ಕಾರ್ಯಗಳನ್ನು ಕೈಗೊಂಡಿದ್ದಾರೆ’ ಎಂದರು.</p>.<p>ವಿಧಾನ ಪರಿಷತ್ ಸಭಾಪತಿ ರಘುನಾಥ ಮಲ್ಕಾಪುರೆ, ಎಐಸಿಸಿ ಸದಸ್ಯ ಆನಂದ ದೇವಪ್ಪ, ಜಯವಿಭವಸ್ವಾಮಿ ಮೈಸೂರು, ಡಾ.ಜಗನ್ನಾಥ ಹೆಬ್ಬಾಳೆ ಮಾತನಾಡಿದರು.</p>.<p>ಉದ್ಯಮಿ ಗುರುನಾಥ ಕೊಳ್ಳೂರ್ ಅವರಿಗೆ ‘ದಾಸೋಹ ರತ್ನ ಪ್ರಶಸ್ತಿ’ ನೀಡಲಾಯಿತು. ಹಾರಕೂಡದ ಚನ್ನವೀರ ಶಿವಾಚಾರ್ಯರು, ಹುಲಸೂರಿನ ಶಿವಾನಂದ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಬಾಬು ವಾಲಿ, ಶಿವರಾಜ ನರಶೆಟ್ಟಿ, ಗುಂಡುರೆಡ್ಡಿ, ಪ್ರದೀಪ ವಾತಡೆ, ಡಾ.ಎಸ್.ಬಿ.ದುರ್ಗೆ ಇದ್ದರು.</p>.<p>ಇದಕ್ಕೂ ಮೊದಲು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಷಟಸ್ಥಲ್ ಧ್ವಜಾರೋಹಣಗೈದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>