<p><strong>ಬೀದರ್:</strong> ಬಸವಕಲ್ಯಾಣದ ಅನುಭವ ಮಂಟಪ ಪ್ರಾಂಗಣದಲ್ಲಿ ನ.29, 30ರಂದು 46ನೇ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸ್ವಾಗತ ಸಮಿತಿ ಅಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ನ.29ರಂದು ಬೆಳಿಗ್ಗೆ 11ಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಉದ್ಘಾಟಿಸುವರು. ಬಳಿಕ ಗೋಷ್ಠಿಗಳು ಜರುಗಲಿವೆ’ ಎಂದು ಹೇಳಿದರು.</p>.<p>ನಾಡಿನ ಪ್ರಮುಖ ಮಠಾಧೀಶರು, ಬಸವತತ್ವ ಚಿಂತಕರು ಭಾಗವಹಿಸುವರು. ವಿವಿಧ ರಾಜ್ಯಗಳ ಸುಮಾರು 25ಸಾವಿರಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಬರುವ ಭಕ್ತರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಬಸವಾದಿ ಶರಣರ ವಿಚಾರಗಳ ಪ್ರಚಾರ, ಪ್ರಸಾರಕ್ಕಾಗಿ ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರು, ಮಾಜಿಸಚಿವ ಭೀಮಣ್ಣಾ ಖಂಡ್ರೆ ಅವರು ದೂರದೃಷ್ಟಿ ಇಟ್ಟುಕೊಂಡು ಈ ಉತ್ಸವ ಆರಂಭಿಸಿದ್ದರು. ಅದನ್ನು ಬಸವಲಿಂಗ ಪಟ್ಟದ್ದೇವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.</p>.<p>ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು, ಪ್ರಮುಖರಾದ ಆನಂದ ದೇವಪ್ಪ, ಬಸವರಾಜ ಧನ್ನೂರ, ಜೈರಾಜ ಖಂಡ್ರೆ, ಹಾವಶೆಟ್ಟಿ ಪಾಟೀಲ, ಶಕುಂತಲಾ ಬೆಲ್ದಾಳೆ, ಶಶಿಕಾಂತ ದುರ್ಗೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬಸವಕಲ್ಯಾಣದ ಅನುಭವ ಮಂಟಪ ಪ್ರಾಂಗಣದಲ್ಲಿ ನ.29, 30ರಂದು 46ನೇ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸ್ವಾಗತ ಸಮಿತಿ ಅಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ನ.29ರಂದು ಬೆಳಿಗ್ಗೆ 11ಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಉದ್ಘಾಟಿಸುವರು. ಬಳಿಕ ಗೋಷ್ಠಿಗಳು ಜರುಗಲಿವೆ’ ಎಂದು ಹೇಳಿದರು.</p>.<p>ನಾಡಿನ ಪ್ರಮುಖ ಮಠಾಧೀಶರು, ಬಸವತತ್ವ ಚಿಂತಕರು ಭಾಗವಹಿಸುವರು. ವಿವಿಧ ರಾಜ್ಯಗಳ ಸುಮಾರು 25ಸಾವಿರಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಬರುವ ಭಕ್ತರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಬಸವಾದಿ ಶರಣರ ವಿಚಾರಗಳ ಪ್ರಚಾರ, ಪ್ರಸಾರಕ್ಕಾಗಿ ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರು, ಮಾಜಿಸಚಿವ ಭೀಮಣ್ಣಾ ಖಂಡ್ರೆ ಅವರು ದೂರದೃಷ್ಟಿ ಇಟ್ಟುಕೊಂಡು ಈ ಉತ್ಸವ ಆರಂಭಿಸಿದ್ದರು. ಅದನ್ನು ಬಸವಲಿಂಗ ಪಟ್ಟದ್ದೇವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.</p>.<p>ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು, ಪ್ರಮುಖರಾದ ಆನಂದ ದೇವಪ್ಪ, ಬಸವರಾಜ ಧನ್ನೂರ, ಜೈರಾಜ ಖಂಡ್ರೆ, ಹಾವಶೆಟ್ಟಿ ಪಾಟೀಲ, ಶಕುಂತಲಾ ಬೆಲ್ದಾಳೆ, ಶಶಿಕಾಂತ ದುರ್ಗೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>