‘ಕಾಯಂ ಪಿಡಿಒ ಹಾಗೂ ಕಾರ್ಯದರ್ಶಿ ಇಲ್ಲದ ಕಾರಣ ಅನೇಕ ಸಮಸ್ಯೆಗಳು ತಲೆದೋರಿವೆ. ಈಚೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅವರನ್ನು ಭೇಟಿ ಮಾಡಿ ಕಾಯಂ ಪಿಡಿಒ ಹಾಗೂ ಕಾರ್ಯದರ್ಶಿ ನೇಮಕಕ್ಕೆ ಮನವಿ ಮಾಡಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.