<p><strong>ಬೀದರ್</strong>: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರದ ಚೆನ್ನಬಸಮ್ಮ ಕಾಲೇಜಿನಲ್ಲಿ 2024–25ನೇ ಸಾಲಿನಲ್ಲಿ ‘ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್’ (ಬಿಸಿಎ) ಪದವಿ ಕೋರ್ಸ್ ಆರಂಭಿಸಲು ‘ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜ್ಯುಕೇಶನ್’ (ಎಐಸಿಟಿಇ) ಅನುಮೋದನೆ ನೀಡಿದೆ.</p>.<p>ಈ ಶೈಕ್ಷಣಿಕ ವರ್ಷದಿಂದ ಮೊದಲ ಬಾರಿಗೆ ಎಐಸಿಟಿಇ, ಶಿಕ್ಷಣ ಸಂಸ್ಥೆಗಳು ನೀಡುವ ಬಿಸಿಎ ಕೋರ್ಸ್ ತನ್ನ ವ್ಯಾಪ್ತಿಗೆ ತಂದಿದೆ. ಈ ಕೋರ್ಸ್ ನಡೆಸಲು ಎಐಸಿಟಿಇ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಿದೆ.</p>.<p>ಬಿಸಿಎ ಕೋರ್ಸ್ ಎಐಸಿಟಿಇ ವ್ಯಾಪ್ತಿಗೆ ತಂದಿರುವುದರಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ, ಇಂಟರ್ನ್ಶಿಪ್, ಉದ್ಯೋಗಕ್ಕಾಗಿ ಸಹಾಯ, ಫೆಲೋಶಿಪ್ ಮತ್ತು ಇತರೆ ಪ್ರಯೋಜನಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಚೆನ್ನಬಸಮ್ಮ ಕಾಲೇಜಿನ ಪ್ರಾಚಾರ್ಯ ಸತೀಶ್ ಪ್ರತಾಪೂರ ತಿಳಿಸಿದ್ದಾರೆ.</p>.<p>ಬಿಸಿಎ ಕೋರ್ಸ್ ಆರಂಭಿಸಲು ಅನುಮತಿ ಸಿಕ್ಕಿರುವುದಕ್ಕೆ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪಾಜಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರದ ಚೆನ್ನಬಸಮ್ಮ ಕಾಲೇಜಿನಲ್ಲಿ 2024–25ನೇ ಸಾಲಿನಲ್ಲಿ ‘ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್’ (ಬಿಸಿಎ) ಪದವಿ ಕೋರ್ಸ್ ಆರಂಭಿಸಲು ‘ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜ್ಯುಕೇಶನ್’ (ಎಐಸಿಟಿಇ) ಅನುಮೋದನೆ ನೀಡಿದೆ.</p>.<p>ಈ ಶೈಕ್ಷಣಿಕ ವರ್ಷದಿಂದ ಮೊದಲ ಬಾರಿಗೆ ಎಐಸಿಟಿಇ, ಶಿಕ್ಷಣ ಸಂಸ್ಥೆಗಳು ನೀಡುವ ಬಿಸಿಎ ಕೋರ್ಸ್ ತನ್ನ ವ್ಯಾಪ್ತಿಗೆ ತಂದಿದೆ. ಈ ಕೋರ್ಸ್ ನಡೆಸಲು ಎಐಸಿಟಿಇ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಿದೆ.</p>.<p>ಬಿಸಿಎ ಕೋರ್ಸ್ ಎಐಸಿಟಿಇ ವ್ಯಾಪ್ತಿಗೆ ತಂದಿರುವುದರಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ, ಇಂಟರ್ನ್ಶಿಪ್, ಉದ್ಯೋಗಕ್ಕಾಗಿ ಸಹಾಯ, ಫೆಲೋಶಿಪ್ ಮತ್ತು ಇತರೆ ಪ್ರಯೋಜನಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಚೆನ್ನಬಸಮ್ಮ ಕಾಲೇಜಿನ ಪ್ರಾಚಾರ್ಯ ಸತೀಶ್ ಪ್ರತಾಪೂರ ತಿಳಿಸಿದ್ದಾರೆ.</p>.<p>ಬಿಸಿಎ ಕೋರ್ಸ್ ಆರಂಭಿಸಲು ಅನುಮತಿ ಸಿಕ್ಕಿರುವುದಕ್ಕೆ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪಾಜಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>