ರಾಜ್ಯದಲ್ಲಿ ನವೆಂಬರ್ 30 ರಿಂದಲೇ ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ನಡುವೆ ಸಚಿವರು ಕಾಮಗಾರಿಗೆ ಚಾಲನೆ ನೀಡಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಕರ್ನಾಟಕ ಪಂಚಾಯತ್ರಾಜ್ ಅಧಿನಿಯಮ 1993 ರ, ಕರ್ನಾಟಕ ಮುನ್ಸಿಪಾಲಿಟಿ ಅಧಿನಿಯಮ 1964 ರ ಹಾಗೂ ಕರ್ನಾಟಕ ಮುನ್ಸಿಪಾಲಿಟಿ ಅಧಿನಿಯಮ 1976ರ ನಿಯಮಗಳನ್ನು ಉಲ್ಲಂಘಿಸಿದಂತಾಗಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.