<p><strong>ಬೀದರ್: </strong>‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ವರಿಷ್ಠರು ಮನವಿ ಮಾಡಿಕೊಂಡರೂ ಸ್ವಕ್ಷೇತ್ರ ಬೀದರ್ ದಕ್ಷಿಣ ಬಿಟ್ಟು ಬೇರೆ ಕಡೆಯಿಂದ ಸ್ಪರ್ಧಿಸಲಾರೆ ಎಂದು ನಯವಾಗಿಯೇ ನಿರಾಕರಿಸಿದ್ದೇನೆ’ ಎಂದು ಮಾಜಿ ಶಾಸಕ ಅಶೋಕ ಖೇಣಿ ಹೇಳಿದರು.</p>.<p>‘ಬಸವಕಲ್ಯಾಣದಲ್ಲಿ ಅದೇ ಕ್ಷೇತ್ರದವರು ಸ್ಪರ್ಧಿಸಬೇಕು. ಹೊರಗಿನವರು ಸ್ಪರ್ಧಿಸಿದರೆ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಲು ಆಗುವುದಿಲ್ಲ. ಮತದಾರರು ಚುನಾಯಿತ ಪ್ರತಿನಿಧಿಯನ್ನು ಸುಲಭವಾಗಿ ಸಂಪರ್ಕಿಸಲು ಸಾಧ್ಯವೂ ಆಗುವುದಿಲ್ಲ. ಸ್ಥಳೀಯರಿಗೆ ಟಿಕೆಟ್ ಕೊಡುವುದು ಒಳ್ಳೆಯದು’ ಎಂದು ನಗರದ ತಮ್ಮ ನಿವಾಸದಲ್ಲಿ ಶನಿವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.</p>.<p>‘ಶಾಸಕರಾಗಿದ್ದ ಬಿ.ನಾರಾಯಣರಾವ್ ಅವರ ಪತ್ನಿ ಅಥವಾ ಪುತ್ರನಿಗೆ ಟಿಕೆಟ್ ಕೊಡುವುದು ಪಕ್ಷದ ವರಿಷ್ಠರಿಗೆ ಹಾಗೂ ಸ್ಪರ್ಧಿಸಲು ಇಚ್ಛಿಸುವವರಿಗೆ ಬಿಟ್ಟ ವಿಚಾರ. ಈ ವಿಷಯದಲ್ಲಿ ನಾನು ಮಾತನಾಡಲು ಇಷ್ಟಪಡುವುದಿಲ್ಲ’ ಎಂದರು.</p>.<p>‘ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸೋತರೂ ಕ್ಷೇತ್ರದ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನನ್ನ ಅವಧಿಯಲ್ಲಿ ₹ 2,250 ಕೋಟಿ ಅನುದಾನ ತಂದು ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಪಡಿಸಿದ್ದೇನೆ. ಪ್ರಸ್ತುತ ಎಲ್ಲ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕ್ಷೇತ್ರದ ಜನರಿಗೆ ಉದ್ಯೋಗ ಕಲ್ಪಿಸುವ ದಿಸೆಯಲ್ಲಿ 500 ಎಕರೆ ಪ್ರದೇಶದಲ್ಲಿ ₹ 100 ಕೋಟಿ ವೆಚ್ಚದಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವ ಉದ್ದೇಶ ಹೊಂದಿದ್ದೇನೆ’ ಎಂದು ತಿಳಿಸಿದರು.</p>.<p>‘ಉದ್ಯಮಿಗಳು, ರೈತರು ಹಾಗೂ ಗ್ರಾಮದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ವರಿಷ್ಠರು ಮನವಿ ಮಾಡಿಕೊಂಡರೂ ಸ್ವಕ್ಷೇತ್ರ ಬೀದರ್ ದಕ್ಷಿಣ ಬಿಟ್ಟು ಬೇರೆ ಕಡೆಯಿಂದ ಸ್ಪರ್ಧಿಸಲಾರೆ ಎಂದು ನಯವಾಗಿಯೇ ನಿರಾಕರಿಸಿದ್ದೇನೆ’ ಎಂದು ಮಾಜಿ ಶಾಸಕ ಅಶೋಕ ಖೇಣಿ ಹೇಳಿದರು.</p>.<p>‘ಬಸವಕಲ್ಯಾಣದಲ್ಲಿ ಅದೇ ಕ್ಷೇತ್ರದವರು ಸ್ಪರ್ಧಿಸಬೇಕು. ಹೊರಗಿನವರು ಸ್ಪರ್ಧಿಸಿದರೆ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಲು ಆಗುವುದಿಲ್ಲ. ಮತದಾರರು ಚುನಾಯಿತ ಪ್ರತಿನಿಧಿಯನ್ನು ಸುಲಭವಾಗಿ ಸಂಪರ್ಕಿಸಲು ಸಾಧ್ಯವೂ ಆಗುವುದಿಲ್ಲ. ಸ್ಥಳೀಯರಿಗೆ ಟಿಕೆಟ್ ಕೊಡುವುದು ಒಳ್ಳೆಯದು’ ಎಂದು ನಗರದ ತಮ್ಮ ನಿವಾಸದಲ್ಲಿ ಶನಿವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.</p>.<p>‘ಶಾಸಕರಾಗಿದ್ದ ಬಿ.ನಾರಾಯಣರಾವ್ ಅವರ ಪತ್ನಿ ಅಥವಾ ಪುತ್ರನಿಗೆ ಟಿಕೆಟ್ ಕೊಡುವುದು ಪಕ್ಷದ ವರಿಷ್ಠರಿಗೆ ಹಾಗೂ ಸ್ಪರ್ಧಿಸಲು ಇಚ್ಛಿಸುವವರಿಗೆ ಬಿಟ್ಟ ವಿಚಾರ. ಈ ವಿಷಯದಲ್ಲಿ ನಾನು ಮಾತನಾಡಲು ಇಷ್ಟಪಡುವುದಿಲ್ಲ’ ಎಂದರು.</p>.<p>‘ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸೋತರೂ ಕ್ಷೇತ್ರದ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನನ್ನ ಅವಧಿಯಲ್ಲಿ ₹ 2,250 ಕೋಟಿ ಅನುದಾನ ತಂದು ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಪಡಿಸಿದ್ದೇನೆ. ಪ್ರಸ್ತುತ ಎಲ್ಲ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕ್ಷೇತ್ರದ ಜನರಿಗೆ ಉದ್ಯೋಗ ಕಲ್ಪಿಸುವ ದಿಸೆಯಲ್ಲಿ 500 ಎಕರೆ ಪ್ರದೇಶದಲ್ಲಿ ₹ 100 ಕೋಟಿ ವೆಚ್ಚದಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವ ಉದ್ದೇಶ ಹೊಂದಿದ್ದೇನೆ’ ಎಂದು ತಿಳಿಸಿದರು.</p>.<p>‘ಉದ್ಯಮಿಗಳು, ರೈತರು ಹಾಗೂ ಗ್ರಾಮದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>