‘ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸೋತರೂ ಕ್ಷೇತ್ರದ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನನ್ನ ಅವಧಿಯಲ್ಲಿ ₹ 2,250 ಕೋಟಿ ಅನುದಾನ ತಂದು ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಪಡಿಸಿದ್ದೇನೆ. ಪ್ರಸ್ತುತ ಎಲ್ಲ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕ್ಷೇತ್ರದ ಜನರಿಗೆ ಉದ್ಯೋಗ ಕಲ್ಪಿಸುವ ದಿಸೆಯಲ್ಲಿ 500 ಎಕರೆ ಪ್ರದೇಶದಲ್ಲಿ ₹ 100 ಕೋಟಿ ವೆಚ್ಚದಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವ ಉದ್ದೇಶ ಹೊಂದಿದ್ದೇನೆ’ ಎಂದು ತಿಳಿಸಿದರು.