ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲಾ ವಕೀಲರ ಸಂಘ: ಮಾನೂರೆ ಅಧ್ಯಕ್ಷ, ಪಾಟೀಲ ಪ್ರಧಾನ ಕಾರ್ಯದರ್ಶಿ

ಬೀದರ್ ಜಿಲ್ಲಾ ವಕೀಲರ ಸಂಘ
Last Updated 6 ಆಗಸ್ಟ್ 2021, 12:55 IST
ಅಕ್ಷರ ಗಾತ್ರ

ಬೀದರ್: ಬೀದರ್ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಮಾನೂರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಶರಣಪ್ಪ(ಪುಟ್ಟು) ಪಾಟೀಲ ಆಯ್ಕೆಯಾಗಿದ್ದಾರೆ.

ಇಲ್ಲಿಯ ವಕೀಲರ ಸಂಘದ ಕಚೇರಿಯಲ್ಲಿ ಸಂಘದ ಐದು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪ್ರತಿ ಸ್ಥಾನಕ್ಕೆ ಒಬ್ಬೊಬ್ಬರೇ ಅಂತಿಮ ಕಣದಲ್ಲಿ ಉಳಿದ ಪ್ರಯುಕ್ತ ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ರವೀಂದ್ರ ವಾಡೆ, ಕಾರ್ಯದರ್ಶಿಯಾಗಿ ಕೃಷ್ಣ ಬಿರಾದಾರ ಮತ್ತು ಖಜಾಂಚಿಯಾಗಿ ಅಬ್ದುಲ್ ಹಫೀಜ್ ಆಯ್ಕೆಯಾದರು.

ಶಿವಶರಣಪ್ಪ ಪಾಟೀಲ ಮೂರನೇ ಬಾರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.

ಚುನಾವಣಾಧಿಕಾರಿಯಾಗಿದ್ದ ಗುರುರಾಜ ಚಿಮಕೋಡೆ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು.
ನೂತನ ಪದಾಧಿಕಾರಿಗಳಿಗೆ ವಕೀಲರು ಪುಷ್ಪಗುಚ್ಛ ನೀಡಿ ಶುಭ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT