<p><strong>ಅಷ್ಟೂರು (ಜನವಾಡ)</strong>: ‘ಭಾವೈಕ್ಯದ ತಾಣವಾದ ಅಷ್ಟೂರಿನ ಗುಮ್ಮಟಗಳನ್ನು ವಿಶ್ವದ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು’ ಎಂದು ಬೇಮಳಖೇಡದ ರಾಜಶೇಖರ ಶಿವಾಚಾರ್ಯ ಹೇಳಿದರು.</p>.<p>ಅಲ್ಲಮಪ್ರಭು ದೇವರ ಜಾತ್ರೆ ನಿಮಿತ್ತ ಅಷ್ಟೂರಿನ ಗುಮ್ಮಟಗಳ ಪರಿಸರದಲ್ಲಿ ಗುರುವಾರ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆ ತನ್ನ ಐತಿಹಾಸಿಕ ತಾಣಗಳಿಂದ ದೇಶದ ಗಮನ ಸೆಳೆದಿದೆ. ಇದರ ಇತಿಹಾಸ ರಾಮಾಯಣ ಕಾಲಕ್ಕಿಂತಲೂ ಹಳೆಯದಾಗಿದೆ. ದ್ವಾಪರಯುಗದಲ್ಲಿ ಕುಂತಲ ದೇಶವೆಂದು ಹೆಸರಾಗಿತ್ತು’ ಎಂದು ತಿಳಿಸಿದರು.</p>.<p>ಮಾಡ್ಯಾಳದ ಸೋಮಶೇಖರ ಶಿವರಾಜ ಒಡೆಯರ್, ಶ್ರೀಮಂತ ಧರ್ಮಣ್ಣ ಒಡೆಯರ್, ಶರಣ ಶಂಕರಲಿಂಗ ಮಹಾರಾಜ ಸಾನಿಧ್ಯ ವಹಿಸಿದ್ದರು. ಪಿಕೆಪಿಎಸ್ ಅಧ್ಯಕ್ಷ ಶಿವಕುಮಾರ ಪಾಟೀಲ, ಉಪಾಧ್ಯಕ್ಷ ಸಂಜುಕುಮಾರ, ಕಾರ್ಯನಿರ್ವಹಣಾಧಿಕಾರಿ ಜಯರಾಜ ಇದ್ದರು. ಶಶಿಕುಮಾರ ಪಾಟೀಲ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಷ್ಟೂರು (ಜನವಾಡ)</strong>: ‘ಭಾವೈಕ್ಯದ ತಾಣವಾದ ಅಷ್ಟೂರಿನ ಗುಮ್ಮಟಗಳನ್ನು ವಿಶ್ವದ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು’ ಎಂದು ಬೇಮಳಖೇಡದ ರಾಜಶೇಖರ ಶಿವಾಚಾರ್ಯ ಹೇಳಿದರು.</p>.<p>ಅಲ್ಲಮಪ್ರಭು ದೇವರ ಜಾತ್ರೆ ನಿಮಿತ್ತ ಅಷ್ಟೂರಿನ ಗುಮ್ಮಟಗಳ ಪರಿಸರದಲ್ಲಿ ಗುರುವಾರ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆ ತನ್ನ ಐತಿಹಾಸಿಕ ತಾಣಗಳಿಂದ ದೇಶದ ಗಮನ ಸೆಳೆದಿದೆ. ಇದರ ಇತಿಹಾಸ ರಾಮಾಯಣ ಕಾಲಕ್ಕಿಂತಲೂ ಹಳೆಯದಾಗಿದೆ. ದ್ವಾಪರಯುಗದಲ್ಲಿ ಕುಂತಲ ದೇಶವೆಂದು ಹೆಸರಾಗಿತ್ತು’ ಎಂದು ತಿಳಿಸಿದರು.</p>.<p>ಮಾಡ್ಯಾಳದ ಸೋಮಶೇಖರ ಶಿವರಾಜ ಒಡೆಯರ್, ಶ್ರೀಮಂತ ಧರ್ಮಣ್ಣ ಒಡೆಯರ್, ಶರಣ ಶಂಕರಲಿಂಗ ಮಹಾರಾಜ ಸಾನಿಧ್ಯ ವಹಿಸಿದ್ದರು. ಪಿಕೆಪಿಎಸ್ ಅಧ್ಯಕ್ಷ ಶಿವಕುಮಾರ ಪಾಟೀಲ, ಉಪಾಧ್ಯಕ್ಷ ಸಂಜುಕುಮಾರ, ಕಾರ್ಯನಿರ್ವಹಣಾಧಿಕಾರಿ ಜಯರಾಜ ಇದ್ದರು. ಶಶಿಕುಮಾರ ಪಾಟೀಲ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>