ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾಥ ಬಾಲಕಿಯರಿಗೆ ₹ 50 ಸಾವಿರ ನೆರವು

ಕೋವಿಡ್‌ನಿಂದ ತಾಯಿಯನ್ನು ಕಳೆದುಕೊಂಡ ಹಣಕುಣಿ ಗ್ರಾಮದ ಮಕ್ಕಳು
Last Updated 14 ಜೂನ್ 2021, 5:19 IST
ಅಕ್ಷರ ಗಾತ್ರ

ಬೀದರ್: ಹುಮನಾಬಾದ್‌ ತಾಲ್ಲೂಕಿನ ಹಣಕುಣಿಯ ತಂದೆ ತಾಯಿ ಕಳೆದುಕೊಂಡ ಅನಾಥರಾದ ಅಶ್ವಿನಿ ಹಾಗೂ ಮಹಾನಂದಾ ಅವರ ಮನೆಗೆ ಭಾನುವಾರ ಹುಮನಾಬಾದ್‌ ಶಾಸಕ ರಾಜಶೇಖರ ಪಾಟೀಲ ಹಾಗೂ ವಿವಿಧ ಸಂಸ್ಥೆಗಳ ಪ್ರಮುಖರು ಭೇಟಿ ನೀಡಿ ಬಾಲಕಿಯರಿಗೆ ಧೈರ್ಯ ತುಂಬಿದ್ದಾರೆ.

ಪ್ರಜಾವಾಣಿಯ ಮಕ್ಕಳ ಆಸರೆ ಕಸಿದ ಕೊರೊನಾ ಅಂಕಣದಲ್ಲಿ ‘ಅವ್ವ ನಿತ್ಯ ಕಣ್ಮುಂದೆ ಬರುತ್ತಿದ್ದಾಳೆ’ ಶೀರ್ಷಿಕೆಯಡಿ ಪ್ರಕಟವಾದ ವರದಿಗೆ ಸ್ಪಂದಿಸಿ ಶಾಸಕ ರಾಜಶೇಖರ ಪಾಟೀಲ ಅವರು ವೈಯಕ್ತಿಕವಾಗಿ ₹50 ಸಾವಿರ ಕೊಟ್ಟು ಶಿಕ್ಷಣದ ವೆಚ್ಚವನ್ನೂ ಭರಿಸ ಲಾಗುವುದು ಎಂದು ತಿಳಿಸಿದರು.

‘ಕಂದಾಯ ಇಲಾಖೆ ಬಾಲಕಿಯರ ತಾಯಿಯ ಅಂತ್ಯ ಸಂಸ್ಕಾರಕ್ಕೆ ₹5 ಸಾವಿರ ಕೊಡಬೇಕಿತ್ತು. ಅದನ್ನು ಬಿಡುಗಡೆ ಮಾಡಿಸಲಾಗುವುದು. ರಾಷ್ಟ್ರೀಯ ಭದ್ರತಾ ಕುಟುಂಬ ಯೋಜನೆಯಿಂದ ₹20 ಸಾವಿರ ಒದಗಿಸಲಾಗುವುದು’ ಎಂದು ತಹಶೀಲ್ದಾರ್ ನಾಗಯ್ಯ‌ ಹಿರೇಮಠ ಹೇಳಿದರು.

‘ಮಣ್ಣಿನ ಮನೆ ಕಂಡು ಶಾಸಕರು ಸರ್ಕಾರದಿಂದ ಮನೆ ಮಂಜೂರು ಮಾಡಿಸುವ ಭರವಸೆ ಕೊಟ್ಟಿದ್ದಾರೆ’ ಎಂದು ಬಾಲಕಿಯರ ಸೋದರತ್ತೆ ಲಕ್ಷ್ಮೀ ಬಾಯಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಡಾ.ಗೋವಿಂದ, ಚಿಕ್ಕಪ್ಪ ಮಾಣಿಕರೆಡ್ಡಿ, ಮಹಾನಂದಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT