ಬಸವಕಲ್ಯಾಣ: ತಾಲ್ಲೂಕಿನ ಕೊಹಿನೂರನಲ್ಲಿನ ಎಸ್.ಬಿ.ಐ ಬ್ಯಾಂಕ್ನ ಎಟಿಎಂ ಒಡೆದು ಕಳವು ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮಂಠಾಳ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿಗಳಾದ ಶ್ರೀರಂಗ ಕಾರಬಾರಿ, ರಾಮ ಜಮಾದಾರ, ಪ್ರಶಾಂತ ಎಂಬುವವರು ಬಂಧಿತ ಆರೋಪಿಗಳು. ಇನ್ನು ಕೆಲವರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಲಾಗುತ್ತಿದ್ದು ಅವರ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.