ಔರಾದ್ ಪಟ್ಟಣ ಪಂಚಾಯಿತಿ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಮೇ 14 ರಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾದಿಗ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ವಿಜಯಕುಮಾರ ಕೌಡ್ಯಾಳ ದೂರು ನೀಡಿದ್ದರು. ಇದನ್ನು ಸಹಿಸದೆ ವಿಜಯಸಿಂಗ್ ಅವರು ಕಪಾಳ ಮೋಕ್ಷ ಮಾಡಿದ್ದು, ಕೌಡ್ಯಾಳ ಮೂರ್ಛೆ ಹೋಗಿದ್ದರು ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಹೆಗಡೆ ಆರೋಪಿಸಿದ್ದಾರೆ.