<p><strong>ಕಮಲನಗರ (ಬೀದರ್ ಜಿಲ್ಲೆ):</strong> ತಾಲ್ಲೂಕಿನ ಸಂತಪುರ ಗ್ರಾಮದಲ್ಲಿರುವ ಎಸ್ಬಿಐ ಶಾಖೆಯಿಂದ ಸೋಮವಾರ ರಾತ್ರಿ ಕಳ್ಳರು ಜೆಸಿಬಿ ಯಂತ್ರ ಬಳಸಿ ಬಂಗಾರ ಹಾಗೂ ಹಣ ಕಳವು ಮಾಡಲು ಯತ್ನಿಸಿದ್ದಾರೆ.</p>.<p>ಕಳ್ಳರು ಜೆಸಿಬಿ ಯಂತ್ರದಿಂದ ಕಿಟಕಿ ಒಡೆದು ಒಳ ನುಗ್ಗಿದ್ದಾರೆ. ತಿಜೋರಿ ಒಡೆಯಲು ಹೋದಾಗ ಬ್ಯಾಂಕ್ನ ಆಪತ್ಕಾಲಿನ ಸೈರನ್ ಮೊಳಗಿದ್ದು, ಅದನ್ನು ಕೇಳಿಸಿಕೊಂಡ ಸುತ್ತಮುತ್ತಲಿನ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸಂತಪುರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಬರುವುದನ್ನು ಕಂಡು ಕಳ್ಳರು, ಜೆಸಿಬಿ ಯಂತ್ರವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬ್ಯಾಂಕ್ನಲ್ಲಿ ಯಾವುದೇ ವಸ್ತು ಕಳವು ಆಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಸ್ಥಳಕ್ಕೆ ಭಾಲ್ಕಿ ಡಿವೈಎಸ್ಪಿ ಡಾ.ದೇವರಾಜ, ಔರಾದ್ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಕಮಲನಗರ ಸಿಪಿಐ ಪಾಲಕ್ಷಯ್ಯ ಹಿರೇಮಠ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ (ಬೀದರ್ ಜಿಲ್ಲೆ):</strong> ತಾಲ್ಲೂಕಿನ ಸಂತಪುರ ಗ್ರಾಮದಲ್ಲಿರುವ ಎಸ್ಬಿಐ ಶಾಖೆಯಿಂದ ಸೋಮವಾರ ರಾತ್ರಿ ಕಳ್ಳರು ಜೆಸಿಬಿ ಯಂತ್ರ ಬಳಸಿ ಬಂಗಾರ ಹಾಗೂ ಹಣ ಕಳವು ಮಾಡಲು ಯತ್ನಿಸಿದ್ದಾರೆ.</p>.<p>ಕಳ್ಳರು ಜೆಸಿಬಿ ಯಂತ್ರದಿಂದ ಕಿಟಕಿ ಒಡೆದು ಒಳ ನುಗ್ಗಿದ್ದಾರೆ. ತಿಜೋರಿ ಒಡೆಯಲು ಹೋದಾಗ ಬ್ಯಾಂಕ್ನ ಆಪತ್ಕಾಲಿನ ಸೈರನ್ ಮೊಳಗಿದ್ದು, ಅದನ್ನು ಕೇಳಿಸಿಕೊಂಡ ಸುತ್ತಮುತ್ತಲಿನ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸಂತಪುರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಬರುವುದನ್ನು ಕಂಡು ಕಳ್ಳರು, ಜೆಸಿಬಿ ಯಂತ್ರವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬ್ಯಾಂಕ್ನಲ್ಲಿ ಯಾವುದೇ ವಸ್ತು ಕಳವು ಆಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಸ್ಥಳಕ್ಕೆ ಭಾಲ್ಕಿ ಡಿವೈಎಸ್ಪಿ ಡಾ.ದೇವರಾಜ, ಔರಾದ್ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಕಮಲನಗರ ಸಿಪಿಐ ಪಾಲಕ್ಷಯ್ಯ ಹಿರೇಮಠ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>