<p><strong>ಬೀದರ್</strong>: ‘ಶಾಸಕ ಪ್ರಭು ಚವಾಣ್ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿದೆ’ ಎಂದು ಚವಾಣ್ ಸಂಬಂಧಿ ಕೊಟ್ಟಿರುವ ದೂರಿನ ಮೇರೆಗೆ ಎಂಟು ಜನರ ವಿರುದ್ಧ ತಾಲ್ಲೂಕಿನ ಹೊಕ್ರಾಣಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.</p><p>ಪ್ರಭು ಚವಾಣ್ ಅವರ ಮಗ ಪ್ರತೀಕ್ ಚವಾಣ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಾರಾಷ್ಟ್ರದ ಯುವತಿಯೊಬ್ಬರು ಮಹಿಳಾ ಪೊಲೀಸ್ ಠಾಣೆಗೆ ಭಾನುವಾರ ದೂರು ಕೊಟ್ಟಿದ್ದರು. ಈಗ ಆ ಯುವತಿಯ ಪೋಷಕರು, ಸಹೋದರ ಸೇರಿದಂತೆ ಎಂಟು ಜನರ ವಿರುದ್ಧ ಶಾಸಕರ ಸಂಬಂಧಿ ಮುರಳಿಧರ ಪವಾರ್ ಎಂಬುವರು ದೂರು ಕೊಟ್ಟಿದ್ದಾರೆ.</p><p>ಈ ಎಂಟು ಜನರ ಜತೆಗೆ ಇತರೆ 30ಕ್ಕೂ ಹೆಚ್ಚು ಜನ ತಂಡ ಇದೇ ಜುಲೈ 5ರಂದು ರಾತ್ರಿ 8.30ರ ಸುಮಾರಿಗೆ ಅಕ್ರಮವಾಗಿ ಮನೆಗೆ ನುಗ್ಗಿ ಕಲ್ಲು, ಕಟ್ಟಿಗೆ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಾಸಕರು ತಪ್ಪಿಸಿಕೊಂಡಿದ್ದು, ನನಗೆ ಬೆನ್ನು ಹಾಗೂ ಟೊಂಕದ ಮೇಲೆ ಗಾಯಗಳಾಗಿವೆ. ಘಟನೆಯಲ್ಲಿ ಶಾಸಕರ ಪುತ್ರ ಪ್ರತೀಕ್ ಚವಾಣ್ ಹಾಗೂ ಅಮಿತ್ ರಾಠೋಡ್ ಅವರಿಗೂ ಗಾಯವಾಗಿದೆ. ಮನೆಯಲ್ಲಿದ್ದ ಮಹಿಳೆಯರನ್ನು ಬಿಡದೆ ಅವಾಚ್ಚ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಗೆ ಮುಖಂಡ ದೀಪಕ್ ಪಾಟೀಲ್ ಚಾಂದೋರಿ ಅವರ ಕುಮ್ಮಕು ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.ತಂದೆ -ಮಗನ ಸುಳ್ಳು ಪ್ರಚಾರ ಖಂಡನೀಯ: ಈಶ್ವರ ಖಂಡ್ರೆ ವಿರುದ್ಧ ಭಗವಂತ ಖೂಬಾ ಕಿಡಿ .ಲೈಂಗಿಕ ದೌರ್ಜನ್ಯ ಆರೋಪ: ಶಾಸಕ ಚವಾಣ್ ಮಗನ ವಿರುದ್ಧ ಎಫ್ಐಆರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಶಾಸಕ ಪ್ರಭು ಚವಾಣ್ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿದೆ’ ಎಂದು ಚವಾಣ್ ಸಂಬಂಧಿ ಕೊಟ್ಟಿರುವ ದೂರಿನ ಮೇರೆಗೆ ಎಂಟು ಜನರ ವಿರುದ್ಧ ತಾಲ್ಲೂಕಿನ ಹೊಕ್ರಾಣಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.</p><p>ಪ್ರಭು ಚವಾಣ್ ಅವರ ಮಗ ಪ್ರತೀಕ್ ಚವಾಣ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಾರಾಷ್ಟ್ರದ ಯುವತಿಯೊಬ್ಬರು ಮಹಿಳಾ ಪೊಲೀಸ್ ಠಾಣೆಗೆ ಭಾನುವಾರ ದೂರು ಕೊಟ್ಟಿದ್ದರು. ಈಗ ಆ ಯುವತಿಯ ಪೋಷಕರು, ಸಹೋದರ ಸೇರಿದಂತೆ ಎಂಟು ಜನರ ವಿರುದ್ಧ ಶಾಸಕರ ಸಂಬಂಧಿ ಮುರಳಿಧರ ಪವಾರ್ ಎಂಬುವರು ದೂರು ಕೊಟ್ಟಿದ್ದಾರೆ.</p><p>ಈ ಎಂಟು ಜನರ ಜತೆಗೆ ಇತರೆ 30ಕ್ಕೂ ಹೆಚ್ಚು ಜನ ತಂಡ ಇದೇ ಜುಲೈ 5ರಂದು ರಾತ್ರಿ 8.30ರ ಸುಮಾರಿಗೆ ಅಕ್ರಮವಾಗಿ ಮನೆಗೆ ನುಗ್ಗಿ ಕಲ್ಲು, ಕಟ್ಟಿಗೆ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಾಸಕರು ತಪ್ಪಿಸಿಕೊಂಡಿದ್ದು, ನನಗೆ ಬೆನ್ನು ಹಾಗೂ ಟೊಂಕದ ಮೇಲೆ ಗಾಯಗಳಾಗಿವೆ. ಘಟನೆಯಲ್ಲಿ ಶಾಸಕರ ಪುತ್ರ ಪ್ರತೀಕ್ ಚವಾಣ್ ಹಾಗೂ ಅಮಿತ್ ರಾಠೋಡ್ ಅವರಿಗೂ ಗಾಯವಾಗಿದೆ. ಮನೆಯಲ್ಲಿದ್ದ ಮಹಿಳೆಯರನ್ನು ಬಿಡದೆ ಅವಾಚ್ಚ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಗೆ ಮುಖಂಡ ದೀಪಕ್ ಪಾಟೀಲ್ ಚಾಂದೋರಿ ಅವರ ಕುಮ್ಮಕು ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.ತಂದೆ -ಮಗನ ಸುಳ್ಳು ಪ್ರಚಾರ ಖಂಡನೀಯ: ಈಶ್ವರ ಖಂಡ್ರೆ ವಿರುದ್ಧ ಭಗವಂತ ಖೂಬಾ ಕಿಡಿ .ಲೈಂಗಿಕ ದೌರ್ಜನ್ಯ ಆರೋಪ: ಶಾಸಕ ಚವಾಣ್ ಮಗನ ವಿರುದ್ಧ ಎಫ್ಐಆರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>