<p><strong>ಔರಾದ್ (ಬೀದರ್ ಜಿಲ್ಲೆ):</strong> ಬೈಕ್ ಕಾರು ನಡುವೆ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಪಟ್ಟಣದ ಬಸ್ ನಿಲ್ದಾಣ ಎದುರು ಶನಿವಾರ ನಡೆದಿದೆ.</p><p>ತಾಲ್ಲೂಕಿನ ಎಕಂಬಾ ಗ್ರಾಮದ ಆಕಾಶ ಜ್ಞಾನೋಬಾ ವಾಡಿಕರ್ (18) ಮೃತ ಯುವಕ.</p><p>ದ್ವಿಚಕ್ರ ವಾಹನದ ಮೇಲೆ ಬಸ್ ನಿಲ್ದಾಣ ಕಡೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ನೆಲದ ಮೇಲೆ ಹಾರಿ ಬಿದ್ದ ಸವಾರನ ಮೇಲೆ ಟ್ರ್ಯಾಕ್ಟರ್ ಹರಿದಿದೆ. ತೀವ್ರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p><strong>ಔರಾದ್ (ಬೀದರ್ ಜಿಲ್ಲೆ):</strong> ಬೈಕ್ ಕಾರು ನಡುವೆ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಪಟ್ಟಣದ ಬಸ್ ನಿಲ್ದಾಣ ಎದುರು ಶನಿವಾರ ನಡೆದಿದೆ.</p><p>ತಾಲ್ಲೂಕಿನ ಎಕಂಬಾ ಗ್ರಾಮದ ಆಕಾಶ ಜ್ಞಾನೋಬಾ ವಾಡಿಕರ್ (18) ಮೃತ ಯುವಕ.</p><p>ದ್ವಿಚಕ್ರ ವಾಹನದ ಮೇಲೆ ಬಸ್ ನಿಲ್ದಾಣ ಕಡೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ನೆಲದ ಮೇಲೆ ಹಾರಿ ಬಿದ್ದ ಸವಾರನ ಮೇಲೆ ಟ್ರ್ಯಾಕ್ಟರ್ ಹರಿದಿದೆ. ತೀವ್ರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>