<p><strong>ಔರಾದ್</strong>: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.</p>.<p>ಬೀದರ್ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಆಯಾ ತಾಲ್ಲೂಕಿನ ಆಸ್ಪತ್ರೆಯಲ್ಲೂ ಕೋವಿಡ್ ಸೋಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ 30 ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ.</p>.<p>‘ಇಲ್ಲಿ ಆಕ್ಷಿಜನ್ ವ್ಯವಸ್ಥೆ ಇದೆ. ಸೋಂಕಿತರಿಗೆ ಔಷಧ ವ್ಯವಸ್ಥೆಯೂ ಮಾಡಿಕೊಳ್ಳಲಾಗಿದೆ’ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಸಿದ್ಧಾರ್ಥ ತಿಳಿಸಿದ್ದಾರೆ.</p>.<p>‘ಜಿಲ್ಲಾಡಳಿತದ ಆದೇಶದ ಮೇರೆಗೆ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 80 ಹಾಸಿಗೆಯ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ. ಮನೆಯಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದವರು ಈ ಆರೈಕೆ ಕೇಂದ್ರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರಣಯ್ಯ ಸ್ವಾಮಿ ತಿಳಿಸಿದ್ದಾರೆ.</p>.<p>‘ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಕಾರ್ಯದಲ್ಲಿ ಇಲಾಖೆ ಸಿಬ್ಬಂದಿ ತಮಗೆ ವಹಿಸಿದ ಕೆಲಸ ಬಹಳ ಕಾಳಜಿಯಿಂದ ಮಾಡಬೇಕು. ಜನರ ಜೀವ ಉಳಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p class="Briefhead"><strong>ನಿಯಮ ಪಾಲನೆಗೆ ಅಧ್ಯಕ್ಷರ ಮನವಿ</strong></p>.<p><strong>ಔರಾದ್:</strong> ‘ಜನರು ಕೋವಿಡ್ ನಿಯಮ ಪಾಲಿಸಿ ತಮ್ಮ ಹಾಗೂ ತಮ್ಮ ಕುಟುಂಬದ ಜೀವನ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಕೇರಬಾ ಪವಾರ್ ಮನವಿ ಮಾಡಿದರು.</p>.<p>ಬುಧವಾರ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಅವರು, ‘ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಆಕ್ಸಿಜನ್ ಹಾಗೂ ಔಷಧಿ ಕೊರತೆ ಆಗದಂತೆ ನಿಗಾವಹಿಸಬೇಕು’ ಎಂದು ಸೂಚಿಸಿದರು.</p>.<p>‘ಜನ ಮಾಸ್ಕ್ ಇಲ್ಲದೆ ಮನೆಯಿಂದ ಹೊರಗಡೆ ಬರಬಾರದು. ಆಗಾಗ ಸ್ಯಾನಿಟೈಸರ್ ಬಳಸಬೇಕು. 45 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಇದೇ ವೇಳೆ ಅಧ್ಯಕ್ಷರು ಕೋವಿಡ್ ಲಸಿಕೆ ಪಡೆದುಕೊಂಡರು.</p>.<p>‘ಔರಾದ್ ಪಟ್ಟಣದ ಜನ ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಇದು ಸರಿಯಲ್ಲ. ಕೋವಿಡ್ ವಿರುದ್ಧ ಹೋರಾಡಲು ಲಸಿಕೆ ಪರಿಣಾಮಕಾರಿಯಾಗಿದೆ. ಹೀಗಾಗಿ ತಮ್ಮ ಮನೆಯಲ್ಲಿನ ಹಿರಿಯರಿಗೆ ಮೊದಲು ಲಸಿಕೆ ಕೊಡಿಸಿ’ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಪೋಕಲವಾರ ಮನವಿ ಮಾಡಿದರು.</p>.<p>ಧುರೀಣ ಕೇರಬಾ ಪವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.</p>.<p>ಬೀದರ್ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಆಯಾ ತಾಲ್ಲೂಕಿನ ಆಸ್ಪತ್ರೆಯಲ್ಲೂ ಕೋವಿಡ್ ಸೋಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ 30 ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ.</p>.<p>‘ಇಲ್ಲಿ ಆಕ್ಷಿಜನ್ ವ್ಯವಸ್ಥೆ ಇದೆ. ಸೋಂಕಿತರಿಗೆ ಔಷಧ ವ್ಯವಸ್ಥೆಯೂ ಮಾಡಿಕೊಳ್ಳಲಾಗಿದೆ’ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಸಿದ್ಧಾರ್ಥ ತಿಳಿಸಿದ್ದಾರೆ.</p>.<p>‘ಜಿಲ್ಲಾಡಳಿತದ ಆದೇಶದ ಮೇರೆಗೆ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 80 ಹಾಸಿಗೆಯ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ. ಮನೆಯಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದವರು ಈ ಆರೈಕೆ ಕೇಂದ್ರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರಣಯ್ಯ ಸ್ವಾಮಿ ತಿಳಿಸಿದ್ದಾರೆ.</p>.<p>‘ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಕಾರ್ಯದಲ್ಲಿ ಇಲಾಖೆ ಸಿಬ್ಬಂದಿ ತಮಗೆ ವಹಿಸಿದ ಕೆಲಸ ಬಹಳ ಕಾಳಜಿಯಿಂದ ಮಾಡಬೇಕು. ಜನರ ಜೀವ ಉಳಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p class="Briefhead"><strong>ನಿಯಮ ಪಾಲನೆಗೆ ಅಧ್ಯಕ್ಷರ ಮನವಿ</strong></p>.<p><strong>ಔರಾದ್:</strong> ‘ಜನರು ಕೋವಿಡ್ ನಿಯಮ ಪಾಲಿಸಿ ತಮ್ಮ ಹಾಗೂ ತಮ್ಮ ಕುಟುಂಬದ ಜೀವನ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಕೇರಬಾ ಪವಾರ್ ಮನವಿ ಮಾಡಿದರು.</p>.<p>ಬುಧವಾರ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಅವರು, ‘ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಆಕ್ಸಿಜನ್ ಹಾಗೂ ಔಷಧಿ ಕೊರತೆ ಆಗದಂತೆ ನಿಗಾವಹಿಸಬೇಕು’ ಎಂದು ಸೂಚಿಸಿದರು.</p>.<p>‘ಜನ ಮಾಸ್ಕ್ ಇಲ್ಲದೆ ಮನೆಯಿಂದ ಹೊರಗಡೆ ಬರಬಾರದು. ಆಗಾಗ ಸ್ಯಾನಿಟೈಸರ್ ಬಳಸಬೇಕು. 45 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಇದೇ ವೇಳೆ ಅಧ್ಯಕ್ಷರು ಕೋವಿಡ್ ಲಸಿಕೆ ಪಡೆದುಕೊಂಡರು.</p>.<p>‘ಔರಾದ್ ಪಟ್ಟಣದ ಜನ ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಇದು ಸರಿಯಲ್ಲ. ಕೋವಿಡ್ ವಿರುದ್ಧ ಹೋರಾಡಲು ಲಸಿಕೆ ಪರಿಣಾಮಕಾರಿಯಾಗಿದೆ. ಹೀಗಾಗಿ ತಮ್ಮ ಮನೆಯಲ್ಲಿನ ಹಿರಿಯರಿಗೆ ಮೊದಲು ಲಸಿಕೆ ಕೊಡಿಸಿ’ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಪೋಕಲವಾರ ಮನವಿ ಮಾಡಿದರು.</p>.<p>ಧುರೀಣ ಕೇರಬಾ ಪವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>