<p><strong>ಔರಾದ್:</strong> ತಾಲ್ಲೂಕಿನ ಬೋಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವರಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ನಿರ್ದೇಶನ ನೀಡುವಂತೆ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಹೈಕೋರ್ಟ್ ಮೊರೆ ಹೋಗಿದ್ದಾರೆ. </p>.<p>ಸಾವರಗಾಂವ್ ಗ್ರಾಮಸ್ಥರು ಪ್ರತಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವುದು ಸಾಮಾನ್ಯವಾಗಿದೆ. ಈ ವರ್ಷ ಮಳೆ ಕಡಿಮೆಯಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ನೀರು ತರಲು ಮಹಿಳೆಯರು, ಮಕ್ಕಳು ಅಹೋರಾತ್ರಿ ಅಲೆಯಬೇಕಾಗಿದೆ. ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ₹141 ಲಕ್ಷ ಅನುದಾನ ಮಂಜೂರಾದರೂ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಗ್ರಾಮಸ್ಥರ ಸಂಕಟ ತಪ್ಪಿಸಲು ತಕ್ಷಣ ಕುಡಿಯುವ ನೀರು ಪೂರೈಸಲು ಸಂಬಂಧಿತರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೋರಿ ಏ.23ರಂದು ಬೆಂಗಳೂರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದಾರೆ. </p>.<p>ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಬೀದರ್ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಪ್ರತಿವಾದಿಗಳಾಗಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ತಾಲ್ಲೂಕಿನ ಬೋಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವರಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ನಿರ್ದೇಶನ ನೀಡುವಂತೆ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಹೈಕೋರ್ಟ್ ಮೊರೆ ಹೋಗಿದ್ದಾರೆ. </p>.<p>ಸಾವರಗಾಂವ್ ಗ್ರಾಮಸ್ಥರು ಪ್ರತಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವುದು ಸಾಮಾನ್ಯವಾಗಿದೆ. ಈ ವರ್ಷ ಮಳೆ ಕಡಿಮೆಯಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ನೀರು ತರಲು ಮಹಿಳೆಯರು, ಮಕ್ಕಳು ಅಹೋರಾತ್ರಿ ಅಲೆಯಬೇಕಾಗಿದೆ. ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ₹141 ಲಕ್ಷ ಅನುದಾನ ಮಂಜೂರಾದರೂ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಗ್ರಾಮಸ್ಥರ ಸಂಕಟ ತಪ್ಪಿಸಲು ತಕ್ಷಣ ಕುಡಿಯುವ ನೀರು ಪೂರೈಸಲು ಸಂಬಂಧಿತರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೋರಿ ಏ.23ರಂದು ಬೆಂಗಳೂರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದಾರೆ. </p>.<p>ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಬೀದರ್ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಪ್ರತಿವಾದಿಗಳಾಗಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>