<p>ಔರಾದ್: ‘ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಭಾವನೆಯೊಂದಿಗೆ ಆಚರಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪಿಎಸ್ಐ ರೇಣುಕಾ ಭಾಲೇಕರ್ ಹೇಳಿದರು.</p>.<p>ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣೆಯಲ್ಲಿ ಸೋಮವಾರ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಮೌಲಾನಾ ಚಾಂದ್ ಪಾಷಾ ಮಾತನಾಡಿ, ‘ಹಬ್ಬ ಹರಿದಿನಗಳಲ್ಲಿ ಹಿಂದೂ-ಮುಸ್ಲಿಂ ಎನ್ನದೆ ಎಲ್ಲರೂ ಸಹೋದರತ್ವದ ಭಾವದಿಂದ ಹಬ್ಬಗಳನ್ನು ಆಚರಿಸಬೇಕು. ಪರಸ್ಪರ ಕಷ್ಟ-ಸುಖಗಳಲ್ಲಿ ಭಾಗಿಯಾಗುವುದರ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು’ ಎಂದರು.</p>.<p>ಬೋರಗಿ ಗ್ರಾಮದ ಮುಖಂಡ ಆಯುಬ್ ಪಟೇಲ್ ಮಾತನಾಡಿ, ‘ಅಹಿತಕರ ಘಟನೆಗಳಿಗೆ ಯಾರೂ ಆಸ್ಪದ ನೀಡಬಾರದು. ಪ್ರತಿಯೊಂದು ಗ್ರಾಮದಲ್ಲಿಯೂ ಎಲ್ಲರೂ ಒಗ್ಗಟ್ಟಿನಿಂದ ಹಬ್ಬ ಆಚರಿಸಿ, ಕಾನೂನಿನ ಪರಿಪಾಲನೆಯೊಂದಿಗೆ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ನೆರವೇರಿಸಬೇಕು’ ಎಂದರು.</p>.<p>ಸಭೆಯಲ್ಲಿ ಎಎಸ್ಐ ರವೀಂದ್ರ, ಕಾಶಿನಾಥ ಬೆಳ್ಳೆ, ಲಕ್ಷ್ಮಣ, ದಸ್ತಗೀರ್, ನಾಮದೇವ, ಫಯಾಜ್, ಶೇಖ್ ಮಹಮದ್, ಪೊಲೀಸ್ ಪೇದೆ ಪ್ರಕಾಶ್, ಕೊಟ್ರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-33-734757288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ‘ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಭಾವನೆಯೊಂದಿಗೆ ಆಚರಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪಿಎಸ್ಐ ರೇಣುಕಾ ಭಾಲೇಕರ್ ಹೇಳಿದರು.</p>.<p>ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣೆಯಲ್ಲಿ ಸೋಮವಾರ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಮೌಲಾನಾ ಚಾಂದ್ ಪಾಷಾ ಮಾತನಾಡಿ, ‘ಹಬ್ಬ ಹರಿದಿನಗಳಲ್ಲಿ ಹಿಂದೂ-ಮುಸ್ಲಿಂ ಎನ್ನದೆ ಎಲ್ಲರೂ ಸಹೋದರತ್ವದ ಭಾವದಿಂದ ಹಬ್ಬಗಳನ್ನು ಆಚರಿಸಬೇಕು. ಪರಸ್ಪರ ಕಷ್ಟ-ಸುಖಗಳಲ್ಲಿ ಭಾಗಿಯಾಗುವುದರ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು’ ಎಂದರು.</p>.<p>ಬೋರಗಿ ಗ್ರಾಮದ ಮುಖಂಡ ಆಯುಬ್ ಪಟೇಲ್ ಮಾತನಾಡಿ, ‘ಅಹಿತಕರ ಘಟನೆಗಳಿಗೆ ಯಾರೂ ಆಸ್ಪದ ನೀಡಬಾರದು. ಪ್ರತಿಯೊಂದು ಗ್ರಾಮದಲ್ಲಿಯೂ ಎಲ್ಲರೂ ಒಗ್ಗಟ್ಟಿನಿಂದ ಹಬ್ಬ ಆಚರಿಸಿ, ಕಾನೂನಿನ ಪರಿಪಾಲನೆಯೊಂದಿಗೆ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ನೆರವೇರಿಸಬೇಕು’ ಎಂದರು.</p>.<p>ಸಭೆಯಲ್ಲಿ ಎಎಸ್ಐ ರವೀಂದ್ರ, ಕಾಶಿನಾಥ ಬೆಳ್ಳೆ, ಲಕ್ಷ್ಮಣ, ದಸ್ತಗೀರ್, ನಾಮದೇವ, ಫಯಾಜ್, ಶೇಖ್ ಮಹಮದ್, ಪೊಲೀಸ್ ಪೇದೆ ಪ್ರಕಾಶ್, ಕೊಟ್ರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-33-734757288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>