<p><strong>ಔರಾದ್</strong>: ‘ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೂಲಕ ಸ್ವಸಹಾಯ ಸಂಘಗಳ(ಎಸ್ಎಚ್ಜಿ) ಮೂಲಕ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ನೆರವು ನೀಡಲಾಗುತ್ತಿದೆ ಎಂದು ಹಣೇಗಾಂವ ಮಠದ ಶಂಕರಲಿಂಗ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಯ ಕನಕ ಭವನದಲ್ಲಿ ಮಂಗಳವಾರ ಸ್ವಸಹಾಯ ಗುಂಪಿನ ಮಹಿಳೆಯರಿಂದ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರಿಂದ ಗ್ರಾಮೀಣ ಭಾಗದಲ್ಲಿ ಬದಲಾವಣೆ ಆಗಿದೆ. ಅನೇಕ ಮಹಿಳೆಯರು ತಮ್ಮ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಿದ್ದಾರೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಈ ಬಾರಿ ಧರ್ಮಸ್ಥಳ ಸಂಸ್ಥೆ ವತಿಯಿಂದ ಆಯೋಜಿಸಿದ ಮದ್ಯವರ್ಜನ ಶಿಬಿರ ಯಶಸ್ವಿಯಾಗಿ ನಡೆದಿದೆ. ಸುಮಾರು 50ಕ್ಕೂ ಹೆಚ್ಚು ಜನ ವ್ಯಸನದಿಂದ ಹೊರ ಬಂದಿದ್ದಾರೆ. ಇಂತಹ ಕಾರ್ಯಗಳಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ’ ಎಂದು ತಿಳಿಸಿದರು.</p>.<p>ಮುಖಂಡ ಅಶೋಕ ಶೆಂಬೆಳ್ಳಿ, ಶಾಲಿವಾನ ಉದಗಿರೆ ಮಾತನಾಡಿ, ‘ಧರ್ಮಸ್ಥಳ ಸಂಸ್ಥೆಯಿಂದ ಅನಾಥರಿಗೆ ಮಾಸಾಶನ, ಮನೆ, ಅವರ ಮಕ್ಕಳಿಗೆ ಶಿಷ್ಯವೇತನ ನೀಡುವ ಕಾರ್ಯ ನಿಜಕ್ಕೂ ಸಮಾಜಮುಖಿಯಾಗಿದೆ’ ಎಂದು ಹೇಳಿದರು.</p>.<p>ಕ್ಷೇತ್ರ ಯೋಜನಾಧಿಕಾರಿ ರಾಘವೇಂದ್ರ ಸ್ವಾಗತಿಸಿದರು. ಪತ್ರಕರ್ತ ಅನೀಲ ದೇಶಮುಖ, ಮುಖಂಡ ಶ್ರೀನಿವಾಸ ಖೂಬಾ, ಅಶೋಕ ಅಲ್ಮಾಜೆ, ಮಾರುತಿ ವಾಡೆಕರ, ವಿದ್ಯಾಸಾಗರ, ಲಕ್ಷ್ಮಿಕಾಂತ, ಆದೇಶಕುಮಾರ ಹಾಗೂ ಸ್ವಸಹಾಯ ಗುಂಪಿನ ಸದಸ್ಯರು ಹಾಜರಿದ್ದರು. ವ್ಯಸನದಿಂದ ಮುಕ್ತಿ ಪಡೆದವರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ‘ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೂಲಕ ಸ್ವಸಹಾಯ ಸಂಘಗಳ(ಎಸ್ಎಚ್ಜಿ) ಮೂಲಕ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ನೆರವು ನೀಡಲಾಗುತ್ತಿದೆ ಎಂದು ಹಣೇಗಾಂವ ಮಠದ ಶಂಕರಲಿಂಗ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಯ ಕನಕ ಭವನದಲ್ಲಿ ಮಂಗಳವಾರ ಸ್ವಸಹಾಯ ಗುಂಪಿನ ಮಹಿಳೆಯರಿಂದ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರಿಂದ ಗ್ರಾಮೀಣ ಭಾಗದಲ್ಲಿ ಬದಲಾವಣೆ ಆಗಿದೆ. ಅನೇಕ ಮಹಿಳೆಯರು ತಮ್ಮ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಿದ್ದಾರೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಈ ಬಾರಿ ಧರ್ಮಸ್ಥಳ ಸಂಸ್ಥೆ ವತಿಯಿಂದ ಆಯೋಜಿಸಿದ ಮದ್ಯವರ್ಜನ ಶಿಬಿರ ಯಶಸ್ವಿಯಾಗಿ ನಡೆದಿದೆ. ಸುಮಾರು 50ಕ್ಕೂ ಹೆಚ್ಚು ಜನ ವ್ಯಸನದಿಂದ ಹೊರ ಬಂದಿದ್ದಾರೆ. ಇಂತಹ ಕಾರ್ಯಗಳಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ’ ಎಂದು ತಿಳಿಸಿದರು.</p>.<p>ಮುಖಂಡ ಅಶೋಕ ಶೆಂಬೆಳ್ಳಿ, ಶಾಲಿವಾನ ಉದಗಿರೆ ಮಾತನಾಡಿ, ‘ಧರ್ಮಸ್ಥಳ ಸಂಸ್ಥೆಯಿಂದ ಅನಾಥರಿಗೆ ಮಾಸಾಶನ, ಮನೆ, ಅವರ ಮಕ್ಕಳಿಗೆ ಶಿಷ್ಯವೇತನ ನೀಡುವ ಕಾರ್ಯ ನಿಜಕ್ಕೂ ಸಮಾಜಮುಖಿಯಾಗಿದೆ’ ಎಂದು ಹೇಳಿದರು.</p>.<p>ಕ್ಷೇತ್ರ ಯೋಜನಾಧಿಕಾರಿ ರಾಘವೇಂದ್ರ ಸ್ವಾಗತಿಸಿದರು. ಪತ್ರಕರ್ತ ಅನೀಲ ದೇಶಮುಖ, ಮುಖಂಡ ಶ್ರೀನಿವಾಸ ಖೂಬಾ, ಅಶೋಕ ಅಲ್ಮಾಜೆ, ಮಾರುತಿ ವಾಡೆಕರ, ವಿದ್ಯಾಸಾಗರ, ಲಕ್ಷ್ಮಿಕಾಂತ, ಆದೇಶಕುಮಾರ ಹಾಗೂ ಸ್ವಸಹಾಯ ಗುಂಪಿನ ಸದಸ್ಯರು ಹಾಜರಿದ್ದರು. ವ್ಯಸನದಿಂದ ಮುಕ್ತಿ ಪಡೆದವರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>