<p>ಔರಾದ್: ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎಸ್ಐಆರ್ ಹಾಗೂ ಇವಿಎಂ ರದ್ದತಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ 13ನೇ ದಿನಕ್ಕೆ ಮುಂದುವರಿದಿದೆ.</p>.<p>ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ, ಮುಖಂಡ ಸುಭಾಷ ಲಾಧಾ, ರಾಹುಲ್ ಖಂದಾರೆ ಧರಣಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ, ‘ನಿಮ್ಮ ಜತೆ ನಾವಿದ್ದೇವೆ’ ಎಂದು ಗೋಪಾಲಸಿಂಗ್ ಅವರಿಗೆ ಧೈರ್ಯ ತುಂಬಿದ್ದಾರೆ.</p>.<p>ಬೀದರ್ ಜಿಲ್ಲಾ ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿಯ ಸದಸ್ಯರು ಭೇಟಿ ನೀಡಿದರು. ಸಮಿತಿ ಪ್ರಮುಖ ಅಬ್ದುಲ್ ಮನ್ನಾನ್ ಸೇಠ್ ಮಾತನಾಡಿದರು.</p>.<p>ಎಸ್ಐಆರ್ ಹಾಗೂ ಇವಿಎಂ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಔರಾದ್ನಲ್ಲಿ ಶೀಘ್ರದಲ್ಲೇ ಸಮಾವೇಶ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ಜನಾಂದೋಲನ ಸಮಿತಿಯ ಓಂಪ್ರಕಾಶ್ ರೊಟ್ಟೆ, ನಿಜಾಮೊದ್ದೀನ್, ಮಕ್ಸೂದ್ ಚಂದಾ, ಬಂಟಿ ದರ್ಬಾರೆ, ಫಯಾಜ್, ಸಂತೋಷ್ ಸೂರ್ಯವಂಶಿ, ಸಂತೋಷ ಸಿಂಧೆ, ದಿನೇಶ್, ಅಮೀರೋದ್ದೀನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-33-343127549</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎಸ್ಐಆರ್ ಹಾಗೂ ಇವಿಎಂ ರದ್ದತಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ 13ನೇ ದಿನಕ್ಕೆ ಮುಂದುವರಿದಿದೆ.</p>.<p>ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ, ಮುಖಂಡ ಸುಭಾಷ ಲಾಧಾ, ರಾಹುಲ್ ಖಂದಾರೆ ಧರಣಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ, ‘ನಿಮ್ಮ ಜತೆ ನಾವಿದ್ದೇವೆ’ ಎಂದು ಗೋಪಾಲಸಿಂಗ್ ಅವರಿಗೆ ಧೈರ್ಯ ತುಂಬಿದ್ದಾರೆ.</p>.<p>ಬೀದರ್ ಜಿಲ್ಲಾ ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿಯ ಸದಸ್ಯರು ಭೇಟಿ ನೀಡಿದರು. ಸಮಿತಿ ಪ್ರಮುಖ ಅಬ್ದುಲ್ ಮನ್ನಾನ್ ಸೇಠ್ ಮಾತನಾಡಿದರು.</p>.<p>ಎಸ್ಐಆರ್ ಹಾಗೂ ಇವಿಎಂ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಔರಾದ್ನಲ್ಲಿ ಶೀಘ್ರದಲ್ಲೇ ಸಮಾವೇಶ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ಜನಾಂದೋಲನ ಸಮಿತಿಯ ಓಂಪ್ರಕಾಶ್ ರೊಟ್ಟೆ, ನಿಜಾಮೊದ್ದೀನ್, ಮಕ್ಸೂದ್ ಚಂದಾ, ಬಂಟಿ ದರ್ಬಾರೆ, ಫಯಾಜ್, ಸಂತೋಷ್ ಸೂರ್ಯವಂಶಿ, ಸಂತೋಷ ಸಿಂಧೆ, ದಿನೇಶ್, ಅಮೀರೋದ್ದೀನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-33-343127549</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>