<p><strong>ಔರಾದ್</strong>: ಪಟ್ಟಣದ ಪ್ರಮುಖ ಫುಟ್ಪಾತ್ ಅತಿಕ್ರಮಿಸಿದ ಶೆಡ್, ಡಬ್ಬಾ, ತಳ್ಳುಗಾಡಿ ತೆರವು ಕಾರ್ಯಾಚರಣೆ ಗುರುವಾರ ಆರಂಭವಾಗಿದೆ. </p>.<p>ಮೂರು ದಿನಗಳ ಹಿಂದೆಯೇ ಸೂಚನೆ ನೀಡಿದರೂ ರಸ್ತೆ ಬದಿ ಹಾಗೂ ಫುಟ್ಪಾತ್ ಮೇಲಿನ ಅಂಗಡಿಗಳು ಹಾಗೆಯೇ ಇದ್ದವು. ಪಟ್ಟಣ ಪಂಚಾಯತ್ ಸಿಬ್ಬಂದಿ ಬೆಳಿಗ್ಗೆ ಜೆಸಿಬಿ ತಂದು ಅಂಗಡಿಗಳನ್ನು ತೆರವುಗೊಳಿಸಿದರು.</p>.<p>ಪಟ್ಟಣದ ಇಂದಿರಾ ಕ್ಯಾಂಟೀನ್ನಿಂದ ಆರಂಭವಾದ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. 10ಕ್ಕೂ ಹೆಚ್ಚು ಶೆಡ್ಗಳು, 15 ಡಬ್ಬಾಗಳನ್ನು ತೆರವುಗೊಳಿಸಿದರು.</p>.<p>‘ಸಾರ್ಜನಿಕರಿಗೆ ಸುಗಮ ಸಂಚಾರಕ್ಕಾಗಿ ಅತಿಕ್ರಮಣ ತೆರವು ಅಗತ್ಯವಾಗಿದೆ. ಇಲ್ಲಿ ದೊಡ್ಡವರು, ಸಣ್ಣವರು ಎಂಬ ಪ್ರಶ್ನೆ ಇಲ್ಲ. ರಸ್ತೆ ಬದಿ ಹಾಗೂ ರಸ್ತೆ ಮೇಲಿರುವ ಎಲ್ಲ ಅಂಗಡಿಗಳು ತೆರವುಗೊಳಿಸಲಾಗುವುದು’ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ ತಿಳಿಸಿದ್ದಾರೆ.</p>.<p>ಮೊದಲ ಹಂತದಲ್ಲಿ ಪಟ್ಟಣದ ಎಪಿಎಂಸಿಯಿಂದ ಸರ್ಕಾರಿ ಆಸ್ಪತ್ರೆವರೆಗಿನ ತೆರವು ಮುಗಿಸಿ ಚರಂಡಿ ಹೂಳು ತೆಗೆಯುತ್ತೇವೆ. ನಂತರ ಬೇರೆ ಬೇರೆ ಕಡೆ ಅತಿಕ್ರಮಣವಾದ ಎಲ್ಲ ಅಂಗಡಿಗಳು ತೆರವು ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಪಟ್ಟಣದ ಪ್ರಮುಖ ಫುಟ್ಪಾತ್ ಅತಿಕ್ರಮಿಸಿದ ಶೆಡ್, ಡಬ್ಬಾ, ತಳ್ಳುಗಾಡಿ ತೆರವು ಕಾರ್ಯಾಚರಣೆ ಗುರುವಾರ ಆರಂಭವಾಗಿದೆ. </p>.<p>ಮೂರು ದಿನಗಳ ಹಿಂದೆಯೇ ಸೂಚನೆ ನೀಡಿದರೂ ರಸ್ತೆ ಬದಿ ಹಾಗೂ ಫುಟ್ಪಾತ್ ಮೇಲಿನ ಅಂಗಡಿಗಳು ಹಾಗೆಯೇ ಇದ್ದವು. ಪಟ್ಟಣ ಪಂಚಾಯತ್ ಸಿಬ್ಬಂದಿ ಬೆಳಿಗ್ಗೆ ಜೆಸಿಬಿ ತಂದು ಅಂಗಡಿಗಳನ್ನು ತೆರವುಗೊಳಿಸಿದರು.</p>.<p>ಪಟ್ಟಣದ ಇಂದಿರಾ ಕ್ಯಾಂಟೀನ್ನಿಂದ ಆರಂಭವಾದ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. 10ಕ್ಕೂ ಹೆಚ್ಚು ಶೆಡ್ಗಳು, 15 ಡಬ್ಬಾಗಳನ್ನು ತೆರವುಗೊಳಿಸಿದರು.</p>.<p>‘ಸಾರ್ಜನಿಕರಿಗೆ ಸುಗಮ ಸಂಚಾರಕ್ಕಾಗಿ ಅತಿಕ್ರಮಣ ತೆರವು ಅಗತ್ಯವಾಗಿದೆ. ಇಲ್ಲಿ ದೊಡ್ಡವರು, ಸಣ್ಣವರು ಎಂಬ ಪ್ರಶ್ನೆ ಇಲ್ಲ. ರಸ್ತೆ ಬದಿ ಹಾಗೂ ರಸ್ತೆ ಮೇಲಿರುವ ಎಲ್ಲ ಅಂಗಡಿಗಳು ತೆರವುಗೊಳಿಸಲಾಗುವುದು’ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ ತಿಳಿಸಿದ್ದಾರೆ.</p>.<p>ಮೊದಲ ಹಂತದಲ್ಲಿ ಪಟ್ಟಣದ ಎಪಿಎಂಸಿಯಿಂದ ಸರ್ಕಾರಿ ಆಸ್ಪತ್ರೆವರೆಗಿನ ತೆರವು ಮುಗಿಸಿ ಚರಂಡಿ ಹೂಳು ತೆಗೆಯುತ್ತೇವೆ. ನಂತರ ಬೇರೆ ಬೇರೆ ಕಡೆ ಅತಿಕ್ರಮಣವಾದ ಎಲ್ಲ ಅಂಗಡಿಗಳು ತೆರವು ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>