Cabinet reshuffle| ಔರಾದ್ ಈಗ ಪವರ್ ಸೆಂಟರ್ ಎಂದ ಸಚಿವ ಪ್ರಭು ಚವಾಣ್

ಬೀದರ್: ‘ಜಿಲ್ಲೆಯ ಜನತೆಗೆ ಇಂದು ಸುದಿನ, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಬೀದರ್ ಸಂಸದ ಭಗವಂತ ಖೂಬಾ ಸೇರ್ಪಡೆಗೊಂಡಿದ್ದು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಿದೆ’ ಎಂದು ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
‘ಭಗವಂತ ಖೂಬಾ ಅವರೂ ಔರಾದ್ ಮೂಲದವರಾಗಿರುವ ಕಾರಣ ನನಗೆ ಹೆಚ್ಚು ಸಂತೋಷವಾಗಿದೆ. ಈಗ ಔರಾದ್
ಕ್ಷೇತ್ರ ಪವರ್ ಸೆಂಟರ್ ಆಗಿ ಗುರುತಿಸಿಕೊಂಡಿದೆ. ಕೇಂದ್ರ ಸಂಪುಟದಲ್ಲಿ ಮೊದಲ ಬಾರಿಗೆ ಜಿಲ್ಲೆಗೆ ಪ್ರಾತಿನಿಧ್ಯ ದೊರಕಿದೆ. ಬೀದರ್ ಅನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.