<p><strong>ಔರಾದ್</strong>: ‘ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ವ್ಯಾಪಕ ಹಾನಿಯಾಗಿದೆ’ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಮನವರಿಕೆ ಮಾಡಿಕೊಟ್ಟರು.<br>‘ಮಳೆ ಜಾಸ್ತಿಯಾಗಿ ಬಿತ್ತನೆಯಾದ ಸೋಯಾಬಿನ್, ಉದ್ದು, ಹೆಸರು, ಹತ್ತಿ ಮುಂತಾದ ಪ್ರಮುಖ ಕೃಷಿ ಬೆಳೆಗಳು ನೀರುಪಾಲಾಗಿವೆ. ಸಾವಿರಾರು ಹೆಕ್ಟೇರ್ ಬೆಳೆ ನಷ್ಟವಾಗಿದೆ. 100ಕ್ಕೂ ಹೆಚ್ಚು ಜಾನುವಾರುಗಳು ಸಾವನಪ್ಪಿವೆ’ ಎಂದು ತಿಳಿಸಿದ್ದಾರೆ.</p>.<p>‘ರೈತರು ಸಾಲ ಮಾಡಿ ಬೆಳೆದ ಬೆಳೆಗಳು ನೆಲಸಮವಾಗಿವೆ. ಅವರ ಭವಿಷ್ಯ ಗೊಂದಲಕ್ಕೆ ತಳ್ಳಲ್ಪಟ್ಟಿದೆ. ಜೊತೆಗೆ ಗ್ರಾಮಗಳು ಜಲಾವೃತಗೊಂಡು ಸುಮಾರು 50ಕ್ಕೂ ಹೆಚ್ಚು ಮನೆಗಳು ಕುಸಿದು ಕುಟುಂಬಗಳು ಬೀದಿಗೆ ಬಂದಿವೆ. ಅಷ್ಟೇ ಅಲ್ಲದೆ, ನಂದಿ ಬಿಜಲಗಾಂವ-ಚಿಕ್ಲಿ ಸೇತುವೆ, ಸಾವರಗಾಂವ-ಹಂಗರಗಾ ಸೇತುವೆ ಸೇರಿ ಹಲವು ಸೇತುವೆ, ಕೆರೆ-ಕಟ್ಟೆಗಳು ಒಡೆದು ಹಾನಿ ಆಗಿದೆ. ರಸ್ತೆ, ವಿದ್ಯುತ್, ನೀರು ಸರಬರಾಜು ವ್ಯವಸ್ಥೆ ಹಾನಿಗೊಳಗಾಗಿದ್ದು, ಸಾರಿಗೆ, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಗ್ರಾಣ, ಶಾಲೆ, ಅಂಗನವಾಡಿಗಳು, ಸರ್ಕಾರಿ ಕಚೇರಿಗಳು ನೀರಿನಿಂದ ಹಾನಿಗೊಂಡು ಕಚೇರಿ ಕೆಲಸಗಳಿಗೂ ಅಡೆತಡೆಯಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>‘ಇಂತಹ ಸಂಕಷ್ಟದ ಸಮಯದಲ್ಲಿ ಔರಾದ್ ಕ್ಷೇತ್ರ ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು. ಈ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ‘ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ವ್ಯಾಪಕ ಹಾನಿಯಾಗಿದೆ’ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಮನವರಿಕೆ ಮಾಡಿಕೊಟ್ಟರು.<br>‘ಮಳೆ ಜಾಸ್ತಿಯಾಗಿ ಬಿತ್ತನೆಯಾದ ಸೋಯಾಬಿನ್, ಉದ್ದು, ಹೆಸರು, ಹತ್ತಿ ಮುಂತಾದ ಪ್ರಮುಖ ಕೃಷಿ ಬೆಳೆಗಳು ನೀರುಪಾಲಾಗಿವೆ. ಸಾವಿರಾರು ಹೆಕ್ಟೇರ್ ಬೆಳೆ ನಷ್ಟವಾಗಿದೆ. 100ಕ್ಕೂ ಹೆಚ್ಚು ಜಾನುವಾರುಗಳು ಸಾವನಪ್ಪಿವೆ’ ಎಂದು ತಿಳಿಸಿದ್ದಾರೆ.</p>.<p>‘ರೈತರು ಸಾಲ ಮಾಡಿ ಬೆಳೆದ ಬೆಳೆಗಳು ನೆಲಸಮವಾಗಿವೆ. ಅವರ ಭವಿಷ್ಯ ಗೊಂದಲಕ್ಕೆ ತಳ್ಳಲ್ಪಟ್ಟಿದೆ. ಜೊತೆಗೆ ಗ್ರಾಮಗಳು ಜಲಾವೃತಗೊಂಡು ಸುಮಾರು 50ಕ್ಕೂ ಹೆಚ್ಚು ಮನೆಗಳು ಕುಸಿದು ಕುಟುಂಬಗಳು ಬೀದಿಗೆ ಬಂದಿವೆ. ಅಷ್ಟೇ ಅಲ್ಲದೆ, ನಂದಿ ಬಿಜಲಗಾಂವ-ಚಿಕ್ಲಿ ಸೇತುವೆ, ಸಾವರಗಾಂವ-ಹಂಗರಗಾ ಸೇತುವೆ ಸೇರಿ ಹಲವು ಸೇತುವೆ, ಕೆರೆ-ಕಟ್ಟೆಗಳು ಒಡೆದು ಹಾನಿ ಆಗಿದೆ. ರಸ್ತೆ, ವಿದ್ಯುತ್, ನೀರು ಸರಬರಾಜು ವ್ಯವಸ್ಥೆ ಹಾನಿಗೊಳಗಾಗಿದ್ದು, ಸಾರಿಗೆ, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಗ್ರಾಣ, ಶಾಲೆ, ಅಂಗನವಾಡಿಗಳು, ಸರ್ಕಾರಿ ಕಚೇರಿಗಳು ನೀರಿನಿಂದ ಹಾನಿಗೊಂಡು ಕಚೇರಿ ಕೆಲಸಗಳಿಗೂ ಅಡೆತಡೆಯಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>‘ಇಂತಹ ಸಂಕಷ್ಟದ ಸಮಯದಲ್ಲಿ ಔರಾದ್ ಕ್ಷೇತ್ರ ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು. ಈ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>