<p>ಔರಾದ್: ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಶಾಸಕ ಪ್ರಭು ಚವಾಣ್ ಸೂಚಿಸಿದರು.</p>.<p>ಇಲ್ಲಿಯ ಶಾಸಕರ ಕಚೇರಿ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುರಕ್ಷತಾ ಕಿಟ್ ವಿತರಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರಿಗೆ ಪಿಂಚಣಿ, ದುರ್ಬಲತೆ ಪಿಂಚಣಿ, ಟೂಲ್ಕಿಟ್, ಹೆರಿಗೆ, ಅಂತ್ಯಕ್ರಿಯೆ, ಶಿಕ್ಷಣ, ವೈದ್ಯಕೀಯ, ಅಪಘಾತ, ಮದುವೆ ಹಾಗೂ ತಾಯಿ-ಮಗು ಸಹಾಯಧನ ಸೇರಿದಂತೆ ಹಲವು ಯೋಜನೆಗಳಿದ್ದು, ಪ್ರತಿಯೊಬ್ಬರೂ ಕಾರ್ಮಿಕ ಕಾರ್ಡ್ ಪಡೆದು ಸೌಲಭ್ಯಗಳನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಕಾರ್ಮಿಕ ನಿರೀಕ್ಷಕ ರಾಹುಲ್ ಬಿ. ರತ್ನಾಕರ ಅವರು ಕಾರ್ಮಿಕ ಕಾರ್ಡ್ ಮತ್ತು ಅದರ ನವೀಕರಣದ ಮಹತ್ವ ತಿಳಿಸಿದರು.</p>.<p>ಸುರೇಶಕುಮಾರ ಅವರು ಆರ್ಪಿಎಲ್ ತರಬೇತಿ ಕುರಿತು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಮಹೇಶ ಪಾಟೀಲ, ಮುಖಂಡರಾದ ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ರಾಮ ನರೋಟೆ, ಶಿವಾಜಿರಾವ ಕಾಳೆ, ಶ್ರೀಮಂತ ಪಾಟೀಲ, ಕೇರಬಾ ಪವಾರ, ಶ್ರೀನಿವಾಸ ಖೂಬಾ, ಬಸವರಾಜ ಹಳ್ಳೆ, ಸುನೀಲಕುಮಾರ ವಾಘಮಾರೆ ಹಾಗೂ ಔರಾದ್ ಕಮಲನಗರ ತಾಲ್ಲೂಕಿನ ಕಾರ್ಮಿಕರು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮದಲ್ಲಿ 434 ಆರ್ಪಿಎಲ್ ಪ್ರಮಾಣ ಪತ್ರ ಹಾಗೂ 400 ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-33-1927145713</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಶಾಸಕ ಪ್ರಭು ಚವಾಣ್ ಸೂಚಿಸಿದರು.</p>.<p>ಇಲ್ಲಿಯ ಶಾಸಕರ ಕಚೇರಿ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುರಕ್ಷತಾ ಕಿಟ್ ವಿತರಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರಿಗೆ ಪಿಂಚಣಿ, ದುರ್ಬಲತೆ ಪಿಂಚಣಿ, ಟೂಲ್ಕಿಟ್, ಹೆರಿಗೆ, ಅಂತ್ಯಕ್ರಿಯೆ, ಶಿಕ್ಷಣ, ವೈದ್ಯಕೀಯ, ಅಪಘಾತ, ಮದುವೆ ಹಾಗೂ ತಾಯಿ-ಮಗು ಸಹಾಯಧನ ಸೇರಿದಂತೆ ಹಲವು ಯೋಜನೆಗಳಿದ್ದು, ಪ್ರತಿಯೊಬ್ಬರೂ ಕಾರ್ಮಿಕ ಕಾರ್ಡ್ ಪಡೆದು ಸೌಲಭ್ಯಗಳನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಕಾರ್ಮಿಕ ನಿರೀಕ್ಷಕ ರಾಹುಲ್ ಬಿ. ರತ್ನಾಕರ ಅವರು ಕಾರ್ಮಿಕ ಕಾರ್ಡ್ ಮತ್ತು ಅದರ ನವೀಕರಣದ ಮಹತ್ವ ತಿಳಿಸಿದರು.</p>.<p>ಸುರೇಶಕುಮಾರ ಅವರು ಆರ್ಪಿಎಲ್ ತರಬೇತಿ ಕುರಿತು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಮಹೇಶ ಪಾಟೀಲ, ಮುಖಂಡರಾದ ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ರಾಮ ನರೋಟೆ, ಶಿವಾಜಿರಾವ ಕಾಳೆ, ಶ್ರೀಮಂತ ಪಾಟೀಲ, ಕೇರಬಾ ಪವಾರ, ಶ್ರೀನಿವಾಸ ಖೂಬಾ, ಬಸವರಾಜ ಹಳ್ಳೆ, ಸುನೀಲಕುಮಾರ ವಾಘಮಾರೆ ಹಾಗೂ ಔರಾದ್ ಕಮಲನಗರ ತಾಲ್ಲೂಕಿನ ಕಾರ್ಮಿಕರು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮದಲ್ಲಿ 434 ಆರ್ಪಿಎಲ್ ಪ್ರಮಾಣ ಪತ್ರ ಹಾಗೂ 400 ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-33-1927145713</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>