<p><strong>ಔರಾದ್:</strong> ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಮಿಂಚಿನ ಸಂಚಾರ ನಡೆಸಿದ್ದಾರೆ.</p>.<p>ಆಯಾ ಗ್ರಾಮ ಪಂಚಾಯಿತಿಯಲ್ಲಿ ನೇಮಕಗೊಂಡ ಆಡಳಿತಾಧಿಕಾರಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳಿಗೆ ಭೇಟಿ ನೀಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.</p>.<p>ಈ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ ಬುಧವಾರ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಜತೆ ಸಮಾಲೋಚನೆ ನಡೆಸಿದರು.</p>.<p>ಮಾರ್ಚ್ 16ರಿಂದ ವಾರ್ಷಿಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬಾಕಿ ಪಠ್ಯಕ್ರಮ ಪೂರ್ಣ ಮಾಡುವುದರ ಜತೆಗೆ ಹಿಂದಿನ ಐದಾರು ವರ್ಷಗಳ ಪ್ರಶ್ನೆಪತ್ರಿಕೆ ಬಿಡಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಆಡಳಿತಾಧಿಕಾರಿ ಹಾಗೂ ಪಿಡಿಒಗಳು ಸಂಜೆ ಹೊತ್ತು ಎಸ್ಎಸ್ಎಲ್ಸಿ ಓದುವ ಮಕ್ಕಳ ಮನೆಗೆ ಭೇಟಿ ನೀಡಬೇಕು. ಓದಿನ ವೇಳೆಯಲ್ಲಿ ಅವರ ಮನೆಯಲ್ಲಿ ಮೊಬೈಲ್ ಬಳಸದಂತೆ ಪಾಲಕರಿಗೆ ತಿಳಿ ಹೇಳಬೇಕು. ಕಲಿಕೆಯಲ್ಲಿ ಸ್ವಲ್ಪ ಹಿನ್ನಡೆ ಇರುವ ಮಕ್ಕಳ ಕಡೆ ವಿಶೇಷ ಗಮನ ಹರಿಸಬೇಕು’ ಎಂದರು.</p>.<p>ಶಿಕ್ಷಣ ಸಂಯೋಜಕರು, ಮುಖ್ಯ ಶಿಕ್ಷಕರು ಇದ್ದರು.</p>
<p><strong>ಔರಾದ್:</strong> ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಮಿಂಚಿನ ಸಂಚಾರ ನಡೆಸಿದ್ದಾರೆ.</p>.<p>ಆಯಾ ಗ್ರಾಮ ಪಂಚಾಯಿತಿಯಲ್ಲಿ ನೇಮಕಗೊಂಡ ಆಡಳಿತಾಧಿಕಾರಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳಿಗೆ ಭೇಟಿ ನೀಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.</p>.<p>ಈ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ ಬುಧವಾರ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಜತೆ ಸಮಾಲೋಚನೆ ನಡೆಸಿದರು.</p>.<p>ಮಾರ್ಚ್ 16ರಿಂದ ವಾರ್ಷಿಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬಾಕಿ ಪಠ್ಯಕ್ರಮ ಪೂರ್ಣ ಮಾಡುವುದರ ಜತೆಗೆ ಹಿಂದಿನ ಐದಾರು ವರ್ಷಗಳ ಪ್ರಶ್ನೆಪತ್ರಿಕೆ ಬಿಡಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಆಡಳಿತಾಧಿಕಾರಿ ಹಾಗೂ ಪಿಡಿಒಗಳು ಸಂಜೆ ಹೊತ್ತು ಎಸ್ಎಸ್ಎಲ್ಸಿ ಓದುವ ಮಕ್ಕಳ ಮನೆಗೆ ಭೇಟಿ ನೀಡಬೇಕು. ಓದಿನ ವೇಳೆಯಲ್ಲಿ ಅವರ ಮನೆಯಲ್ಲಿ ಮೊಬೈಲ್ ಬಳಸದಂತೆ ಪಾಲಕರಿಗೆ ತಿಳಿ ಹೇಳಬೇಕು. ಕಲಿಕೆಯಲ್ಲಿ ಸ್ವಲ್ಪ ಹಿನ್ನಡೆ ಇರುವ ಮಕ್ಕಳ ಕಡೆ ವಿಶೇಷ ಗಮನ ಹರಿಸಬೇಕು’ ಎಂದರು.</p>.<p>ಶಿಕ್ಷಣ ಸಂಯೋಜಕರು, ಮುಖ್ಯ ಶಿಕ್ಷಕರು ಇದ್ದರು.</p>