<p><strong>ಔರಾದ್</strong>: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ ಮೇ 27ರಿಂದ ಆರಂಭವಾಗಲಿದೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.</p>.<p>ಮೇ 27ರಂದು ಔರಾದ್, ಎಕಂಬಾ, ಭಂಡಾರಕುಮಟಾ, 28ರಂದು ಕಮಲನಗರ, ಠಾಣಾಕುಶನೂರ ಹಾಗೂ ಸಂತಪೂರ ಮೇ 29ರಂದು ಚಿಂತಾಕಿ, ವಡಗಾಂವ ಹಾಗೂ ದಾಬಕಾ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆ ಆರಂಭವಾಗಲಿದೆ.</p>.<p>ಕ್ಷೇತ್ರದಲ್ಲಿ ಹೆಚ್ಚಾಗಿ ಸೋಯಾಬೀನ್ ಮತ್ತು ತೊಗರಿ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ರೈತರ ಅವಶ್ಯಕತೆಗೆ ಅನುಗುಣವಾಗಿ ಗುಣಮಟ್ಟದ ಬೀಜಗಳನ್ನು ಸಮರ್ಪಕ ಪ್ರಮಾಣದಲ್ಲಿ ಪೂರೈಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ . ಬಿತ್ತನೆ ಬೀಜದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-33-1955379398</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ ಮೇ 27ರಿಂದ ಆರಂಭವಾಗಲಿದೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.</p>.<p>ಮೇ 27ರಂದು ಔರಾದ್, ಎಕಂಬಾ, ಭಂಡಾರಕುಮಟಾ, 28ರಂದು ಕಮಲನಗರ, ಠಾಣಾಕುಶನೂರ ಹಾಗೂ ಸಂತಪೂರ ಮೇ 29ರಂದು ಚಿಂತಾಕಿ, ವಡಗಾಂವ ಹಾಗೂ ದಾಬಕಾ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆ ಆರಂಭವಾಗಲಿದೆ.</p>.<p>ಕ್ಷೇತ್ರದಲ್ಲಿ ಹೆಚ್ಚಾಗಿ ಸೋಯಾಬೀನ್ ಮತ್ತು ತೊಗರಿ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ರೈತರ ಅವಶ್ಯಕತೆಗೆ ಅನುಗುಣವಾಗಿ ಗುಣಮಟ್ಟದ ಬೀಜಗಳನ್ನು ಸಮರ್ಪಕ ಪ್ರಮಾಣದಲ್ಲಿ ಪೂರೈಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ . ಬಿತ್ತನೆ ಬೀಜದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-33-1955379398</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>