<p>ಔರಾದ್: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಾಂಡಾಗಳಿಗೆ ಇ-ಖಾತಾ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ತಾಂಡಾ ನಿವಾಸಿಗಳು ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರದಿಂದ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂಬರ್ 183ರಲ್ಲಿ 9 ತಾಂಡಾಗಳು ಬರುತ್ತವೆ. ಇಲ್ಲಿ 3-4 ತಲೆಮಾರುಗಳಿಂದ ಜನ ವಾಸವಾಗಿದ್ದು ಇವರನ್ನು ಸಕ್ರಮಗೊಳಿಸಲು ನಿರಂತರ ಹೋರಾಟ ಮಾಡಿದರೂ ಪ್ರಯೋಜನವಾಗುತ್ತಿಲ್ಲ. ಇ-ಖಾತಾ ಸಿಗದೆ ಸರ್ಕಾರದ ಸೌಲಭ್ಯದಿಂದಲೂ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ಮುಖಂಡರು ಹೇಳಿದರು.</p>.<p>ಇದೇ ಬೇಡಿಕೆ ಮುಂದಿಟ್ಟುಕೊಂಡು ಆಗಸ್ಟ್ ತಿಂಗಳಲ್ಲಿ ಪ್ರತಿಭಟನೆ ನಡೆಸಿದಾಗ 30 ದಿನಗಳಲ್ಲಿ ಸಮಸ್ಯೆ ಪರಿಹರಿಸುವುದಾಗಿ ಅಧಿಕಾರಿಗಳು ಹೇಳಿದರು. ಆದರೆ ಇಲ್ಲಿಯ ತನಕ ಸಮಸ್ಯೆ ಪರಿಹಾರವಾಗಿಲ್ಲ ಎಂದು ಪಟ್ಟಣ ಪಂಚಾಯತ್ ಸದಸ್ಯ ಶಿವಾಜಿ ರಾಠೋಡ್ ತಿಳಿಸಿದರು.</p>.<p>ಪಟ್ಟಣ ಸಮೀಪದ 9 ತಾಂಡಾ ನಿವಾಸಿಗಳು 2-3 ತಲೆಮಾರಿನಿಂದ ವಾಸ ಮಾಡುತ್ತಿದ್ದಾರೆ. ಆದರೆ ಅವರಿಗೆ ಇ-ಖಾತಾ ಹಾಗೂ ಮೂಲಸೌಲಭ್ಯ ನೀಡದೆ ವಂಚಿಸುವುದು ಸರಿಯಲ್ಲ ಎಂದು ಸಾಮಾಜಿಕ ಹೋರಾಟಗಾರ ಗುರುನಾಥ ಹೇಳಿದರು.</p>.<p>ರಾಜಕುಮಾರ ರಾಠೋಡ್, ಶಿವಾಜಿ ಚವಾಣ್, ರಾಜು ನಾಯಕ, ಪ್ರಭು ರಾಠೋಡ್, ದಿನೇಶ ರಾಠೋಡ್, ರಮೇಶ ಚವಾಣ್, ಭೀಮರಾವ ರಾಠೋಡ್, ಮುಕ್ತಾಬಾಯಿ ರಾಠೋಡ್, ಪಿಪಳಾಬಾಯಿ ಪವಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಾಂಡಾಗಳಿಗೆ ಇ-ಖಾತಾ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ತಾಂಡಾ ನಿವಾಸಿಗಳು ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರದಿಂದ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂಬರ್ 183ರಲ್ಲಿ 9 ತಾಂಡಾಗಳು ಬರುತ್ತವೆ. ಇಲ್ಲಿ 3-4 ತಲೆಮಾರುಗಳಿಂದ ಜನ ವಾಸವಾಗಿದ್ದು ಇವರನ್ನು ಸಕ್ರಮಗೊಳಿಸಲು ನಿರಂತರ ಹೋರಾಟ ಮಾಡಿದರೂ ಪ್ರಯೋಜನವಾಗುತ್ತಿಲ್ಲ. ಇ-ಖಾತಾ ಸಿಗದೆ ಸರ್ಕಾರದ ಸೌಲಭ್ಯದಿಂದಲೂ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ಮುಖಂಡರು ಹೇಳಿದರು.</p>.<p>ಇದೇ ಬೇಡಿಕೆ ಮುಂದಿಟ್ಟುಕೊಂಡು ಆಗಸ್ಟ್ ತಿಂಗಳಲ್ಲಿ ಪ್ರತಿಭಟನೆ ನಡೆಸಿದಾಗ 30 ದಿನಗಳಲ್ಲಿ ಸಮಸ್ಯೆ ಪರಿಹರಿಸುವುದಾಗಿ ಅಧಿಕಾರಿಗಳು ಹೇಳಿದರು. ಆದರೆ ಇಲ್ಲಿಯ ತನಕ ಸಮಸ್ಯೆ ಪರಿಹಾರವಾಗಿಲ್ಲ ಎಂದು ಪಟ್ಟಣ ಪಂಚಾಯತ್ ಸದಸ್ಯ ಶಿವಾಜಿ ರಾಠೋಡ್ ತಿಳಿಸಿದರು.</p>.<p>ಪಟ್ಟಣ ಸಮೀಪದ 9 ತಾಂಡಾ ನಿವಾಸಿಗಳು 2-3 ತಲೆಮಾರಿನಿಂದ ವಾಸ ಮಾಡುತ್ತಿದ್ದಾರೆ. ಆದರೆ ಅವರಿಗೆ ಇ-ಖಾತಾ ಹಾಗೂ ಮೂಲಸೌಲಭ್ಯ ನೀಡದೆ ವಂಚಿಸುವುದು ಸರಿಯಲ್ಲ ಎಂದು ಸಾಮಾಜಿಕ ಹೋರಾಟಗಾರ ಗುರುನಾಥ ಹೇಳಿದರು.</p>.<p>ರಾಜಕುಮಾರ ರಾಠೋಡ್, ಶಿವಾಜಿ ಚವಾಣ್, ರಾಜು ನಾಯಕ, ಪ್ರಭು ರಾಠೋಡ್, ದಿನೇಶ ರಾಠೋಡ್, ರಮೇಶ ಚವಾಣ್, ಭೀಮರಾವ ರಾಠೋಡ್, ಮುಕ್ತಾಬಾಯಿ ರಾಠೋಡ್, ಪಿಪಳಾಬಾಯಿ ಪವಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>