<p>ಬೀದರ್: ಸರ್ಕಾರ ಲಾಕ್ಡೌನ್ ಮೇ 17ರ ವರೆಗೆ ಮುಂದುವರಿಸಿದೆ. ಬೀದರ್ನ ಓಲ್ಡ್ಸಿಟಿಯನ್ನು ಹೊರತು ಪಡಿಸಿ ಜಿಲ್ಲೆಯನ್ನು ಕಿತ್ತಳೆ ವಲಯದಲ್ಲಿ ಗುರುತಿಸಿ ಆದೇಶ ಹೊರಡಿಸುವಷ್ಟರಲ್ಲಿ ಮತ್ತೆ ಏಳು ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.</p>.<p>ನಗರದ ಮಧ್ಯಭಾಗದಲ್ಲಿರುವ ಖಾಜಿ ಕಾಲೊನಿ ಹಾಗೂ ಇಡೆನ್ ಕಾಲೊನಿಯಲ್ಲಿ ತಲಾ ಒಬ್ಬರಂತೆ ಇಬ್ಬರಿಗೆ ಸೋಂಕು ತಗುಲಿದೆ. ನಂತರ ಜಿಲ್ಲಾಡಳಿತ ಸಡಿಲಿಕೆ ನೀಡಬೇಕೋ, ಬೇಡವೋ ಎನ್ನುವ ಗೊಂದಲದಲ್ಲಿ ಇದೆ.</p>.<p>ಜಿಲ್ಲಾ ಕೇಂದ್ರದಿಂದ ತಾಲ್ಲೂಕು ಕೇಂದ್ರಗಳಿಗೆ ಸಾರಿಗೆ ಸೇವೆ ಆರಂಭವಾಗಿಲ್ಲ. ಬೆಳಿಗ್ಗೆ 9 ಗಂಟೆ ವೇಳೆಗೆ ಅಲ್ಲಲ್ಲಿ ಆಟೊರಿಕ್ಷಾಗಳು ರಸ್ತೆಗೆ ಇಳಿದಿದ್ದವು. ಪೊಲೀಸರು ಆಟೊ ಚಾಲಕರಿಗೆ ಎಚ್ಚರಿಕೆ ನೀಡಿ ಕಳಿಸಿ ಕೊಟ್ಟರು. ಸರ್ಕಾರದಿಂದ ಸ್ಪಷ್ಟ ಆದೇಶ ಬರುವವರೆಗೂ ಆಟೊ ಸಂಚಾರ ಶುರು ಮಾಡದಂತೆ ತಿಳಿಸಿದರು.</p>.<p>ಜನ ಬೆಳಿಗ್ಗೆ ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸಂಚರಿಸಿದ್ದು ಕಂಡು ಬಂದಿತು. ಕಿರಾಣಿ, ಮೊಬೈಲ್, ಎಲೆಕ್ಟ್ರಾನಿಕ್, ಆಟೊಮೊಬೈಲ್. ಪಾದರಕ್ಷೆ, ಪ್ಲಾಸ್ಟಿಕ್, ಸ್ಟೇಷನರಿ, ಎಲೆಕ್ಟ್ರಿಕಲ್ ಉಪಕರಣ, ಎಲೆಕ್ಟ್ರಿಕಲ್ ಉಪಕರಣಗಳ ದುರಸ್ತಿ ಅಂಗಡಿಗಳು ಮಧ್ಯಾಹ್ನದ ವರೆಗೂ ತೆರೆದುಕೊಂಡಿದ್ದವು.</p>.<p>ಕೆಲವು ಹೋಟೆಲ್ಗಳು ಬಾಗಿಲು ತೆರೆದುಕೊಂಡಿದ್ದವು. ಆದರೆ ಒಳಗೆ ಗ್ರಾಹಕರಿಗೆ ಪ್ರವೇಶ ಕಲ್ಪಿಸಿರಲಿಲ್ಲ. ಹೋಟೆಲ್ ಸಿಬ್ಬಂದಿ ಗ್ರಾಹಕರಿಗೆ ಉಪಾಹಾರದ ಪೊಟ್ಟಣಗಳನ್ನು ಕಟ್ಟಿಕೊಡುತ್ತಿದ್ದರು. ಗುರುನಾನಕ್ ಗೇಟ್ ಸಮೀಪದ ಕೆಲ ಹೋಟೆಲ್ಗಳು ಗ್ರಾಹಕರಿಗೆ ಚಹಾ ಮಾರಾಟ ಮಾಡಿದವು.</p>.<p>ಭಾಲ್ಕಿ, ಔರಾದ್, ಹುಮನಾಬಾದ್, ಕಮಲನಗರ, ಹುಲಸೂರು ತಾಲ್ಲೂಕಿನಲ್ಲಿ ಕೋವಿಡ್ 19 ಸೋಂಕಿತರು ಕಂಡು ಬಂದಿಲ್ಲ. ಹೀಗಾಗಿ ಈ ತಾಲ್ಲೂಕುಗಳಲ್ಲಿ ಸ್ವಲ್ಪ ಸಡಿಲಿಕೆ ನೀಡಲಾಗಿದೆ. ಆದರೆ, ಗಡಿಗಳಲ್ಲಿ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳಲ್ಲಿ ಮಾತ್ರ ಬಿಗಿ ಬಂದೋಬಸ್ತ್ ಇದೆ. ಹೊರ ರಾಜ್ಯದವರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಸರ್ಕಾರ ಲಾಕ್ಡೌನ್ ಮೇ 17ರ ವರೆಗೆ ಮುಂದುವರಿಸಿದೆ. ಬೀದರ್ನ ಓಲ್ಡ್ಸಿಟಿಯನ್ನು ಹೊರತು ಪಡಿಸಿ ಜಿಲ್ಲೆಯನ್ನು ಕಿತ್ತಳೆ ವಲಯದಲ್ಲಿ ಗುರುತಿಸಿ ಆದೇಶ ಹೊರಡಿಸುವಷ್ಟರಲ್ಲಿ ಮತ್ತೆ ಏಳು ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.</p>.<p>ನಗರದ ಮಧ್ಯಭಾಗದಲ್ಲಿರುವ ಖಾಜಿ ಕಾಲೊನಿ ಹಾಗೂ ಇಡೆನ್ ಕಾಲೊನಿಯಲ್ಲಿ ತಲಾ ಒಬ್ಬರಂತೆ ಇಬ್ಬರಿಗೆ ಸೋಂಕು ತಗುಲಿದೆ. ನಂತರ ಜಿಲ್ಲಾಡಳಿತ ಸಡಿಲಿಕೆ ನೀಡಬೇಕೋ, ಬೇಡವೋ ಎನ್ನುವ ಗೊಂದಲದಲ್ಲಿ ಇದೆ.</p>.<p>ಜಿಲ್ಲಾ ಕೇಂದ್ರದಿಂದ ತಾಲ್ಲೂಕು ಕೇಂದ್ರಗಳಿಗೆ ಸಾರಿಗೆ ಸೇವೆ ಆರಂಭವಾಗಿಲ್ಲ. ಬೆಳಿಗ್ಗೆ 9 ಗಂಟೆ ವೇಳೆಗೆ ಅಲ್ಲಲ್ಲಿ ಆಟೊರಿಕ್ಷಾಗಳು ರಸ್ತೆಗೆ ಇಳಿದಿದ್ದವು. ಪೊಲೀಸರು ಆಟೊ ಚಾಲಕರಿಗೆ ಎಚ್ಚರಿಕೆ ನೀಡಿ ಕಳಿಸಿ ಕೊಟ್ಟರು. ಸರ್ಕಾರದಿಂದ ಸ್ಪಷ್ಟ ಆದೇಶ ಬರುವವರೆಗೂ ಆಟೊ ಸಂಚಾರ ಶುರು ಮಾಡದಂತೆ ತಿಳಿಸಿದರು.</p>.<p>ಜನ ಬೆಳಿಗ್ಗೆ ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸಂಚರಿಸಿದ್ದು ಕಂಡು ಬಂದಿತು. ಕಿರಾಣಿ, ಮೊಬೈಲ್, ಎಲೆಕ್ಟ್ರಾನಿಕ್, ಆಟೊಮೊಬೈಲ್. ಪಾದರಕ್ಷೆ, ಪ್ಲಾಸ್ಟಿಕ್, ಸ್ಟೇಷನರಿ, ಎಲೆಕ್ಟ್ರಿಕಲ್ ಉಪಕರಣ, ಎಲೆಕ್ಟ್ರಿಕಲ್ ಉಪಕರಣಗಳ ದುರಸ್ತಿ ಅಂಗಡಿಗಳು ಮಧ್ಯಾಹ್ನದ ವರೆಗೂ ತೆರೆದುಕೊಂಡಿದ್ದವು.</p>.<p>ಕೆಲವು ಹೋಟೆಲ್ಗಳು ಬಾಗಿಲು ತೆರೆದುಕೊಂಡಿದ್ದವು. ಆದರೆ ಒಳಗೆ ಗ್ರಾಹಕರಿಗೆ ಪ್ರವೇಶ ಕಲ್ಪಿಸಿರಲಿಲ್ಲ. ಹೋಟೆಲ್ ಸಿಬ್ಬಂದಿ ಗ್ರಾಹಕರಿಗೆ ಉಪಾಹಾರದ ಪೊಟ್ಟಣಗಳನ್ನು ಕಟ್ಟಿಕೊಡುತ್ತಿದ್ದರು. ಗುರುನಾನಕ್ ಗೇಟ್ ಸಮೀಪದ ಕೆಲ ಹೋಟೆಲ್ಗಳು ಗ್ರಾಹಕರಿಗೆ ಚಹಾ ಮಾರಾಟ ಮಾಡಿದವು.</p>.<p>ಭಾಲ್ಕಿ, ಔರಾದ್, ಹುಮನಾಬಾದ್, ಕಮಲನಗರ, ಹುಲಸೂರು ತಾಲ್ಲೂಕಿನಲ್ಲಿ ಕೋವಿಡ್ 19 ಸೋಂಕಿತರು ಕಂಡು ಬಂದಿಲ್ಲ. ಹೀಗಾಗಿ ಈ ತಾಲ್ಲೂಕುಗಳಲ್ಲಿ ಸ್ವಲ್ಪ ಸಡಿಲಿಕೆ ನೀಡಲಾಗಿದೆ. ಆದರೆ, ಗಡಿಗಳಲ್ಲಿ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳಲ್ಲಿ ಮಾತ್ರ ಬಿಗಿ ಬಂದೋಬಸ್ತ್ ಇದೆ. ಹೊರ ರಾಜ್ಯದವರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>