<p><strong>ಖಟಕಚಿಂಚೋಳಿ</strong>: ಹೋಬಳಿಯ ಡಾವರಗಾಂವ್ ಗ್ರಾಮದ ರೈತ ಅಭಿಮನ್ಯು ಪಾಟೀಲ ತಮ್ಮ ಒಂದು ಎಕರೆ ಪ್ರದೇಶದಲ್ಲಿ ಬೆಳೆದ ಅವರೆ ಬೆಳೆ ಹೆಚ್ಚಿನ ಆದಾಯ ತಂದುಕೊಡುವುದರೊಂದಿಗೆ ಹುರುಳಿಕಾಯ ಬೆಳೆಯಿಂದ ಆದ ನಷ್ಟವನ್ನು ಸರಿದೂಗಿಸಿದೆ.</p>.<p>ಸದ್ಯ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿ ಬೆಲೆಗಳು ಗಗನಕ್ಕೇರಿವೆ. ಅವುಗಳ ಸಾಲಿನಲ್ಲಿ ಅವರೆಯೂ ಒಂದಾಗಿದೆ. ಬಿನ್ನಿಸ್ ಬೆಳೆಯಿಂದ ಆದ ನಷ್ಟದಲ್ಲಿರುವಾಗ ಅವರೆ ಕಡಿಮೆ ಸಮಯದಲ್ಲಿ ಹೆಚ್ಚಿನ ಆದಾಯ ತಂದುಕೊಟ್ಟಿದೆ' ಎಂದು ರೈತ ಸಂತಸ ವ್ಯಕ್ತಪಡಿಸುತ್ತಾರೆ.</p>.<p>‘ಬಿತ್ತನೆ ಮಾಡಿದ 60 ರಿಂದ 70 ದಿನಗಳಲ್ಲಿ ಅವರೆಕಾಯಿ ಕಟಾವಿಗೆ ಬರುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಅವರೆ ಪ್ರತಿ ಕ್ವಿಂಟಾಲ್ಗೆ ₹5 ರಿಂದ ₹6 ಸಾವಿರಕ್ಕೆ ಮಾರಾಟ ಆಗುತ್ತಿದೆ. ಬೆಳೆಯೂ ಹುಲುಸಾಗಿ ಬೆಳೆದಿದ್ದು ಪ್ರತಿ ದಿನಕ್ಕೆ ಒಂದು ಕ್ವಿಂಟಾಲ್ನಂತೆ ಇಳುವರಿ ಬರುತ್ತಿದೆ' ಎನ್ನುತ್ತಾರೆ ರೈತ ಅಭಿಮನ್ಯು ಪಾಟೀಲ.</p>.<p>‘ಅವರೆಯನ್ನು ಹೊಲ ಹದ ಮಾಡಿ 2ರಿಂದ 4 ಅಡಿ ಅಂತರದಲ್ಲಿ ಬಿತ್ತನೆ ಮಾಡಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ, ಔಷಧಿ ಸಿಂಪಡಣೆ ಸೇರಿದಂತೆ ಇನ್ನಿತರ ಖರ್ಚು ಸೇರಿ ₹30 ಸಾವಿರದವರೆಗೆ ಆಗಿದೆ. ಅದಕ್ಕೆ ತಕ್ಕಂತೆ ದುಪ್ಪಟ್ಟು ಪ್ರಮಾಣದಲ್ಲಿ ಆದಾಯ ಲಭಿಸುತ್ತಿದೆ' ಎಂದು ತಿಳಿಸುತ್ತಾರೆ.</p>.<p>ಸಾಮಾನ್ಯವಾಗಿ ಅವರೆಕಾಯಿ ಬೆಳೆಗೆ ಕೀಟಬಾಧೆ ಸಮಸ್ಯೆ ನಿರಂತರ ಕಾಡುತ್ತದೆ. ಇದರಿಂದ ರೈತರು ಎದೆಗುಂದದೆ ಒಂದು ಲೀಟರ್ ನೀರಿಗೆ ಅರ್ಧ ಎಂ.ಎಲ್ ಫೇಮ್ ಮಿಶ್ರಣವನ್ನು ಸೇರಿಸಿ ಸಿಂಪಡಿಸಬೇಕು. ಅಥವಾ 1 ಲೀಟರ್ ನೀರಿಗೆ ಅರ್ಧ ಗ್ರಾಂ ಪ್ರೋಕ್ಲೆಮ್ ಬೆರೆಸಿ ಸಿಂಪಡಿಸಬೇಕು. ಇದರಿಂದ ಕೀಟಗಳು ನಿಯಂತ್ರಣಕ್ಕೆ ಬರುತ್ತವೆ' ಎಂದು ತೋಟಗಾರಿಕಾ ವಿಜ್ಞಾನಿ ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ತಿಳಿಸುತ್ತಾರೆ.</p>.<blockquote>65 ರಿಂದ70 ದಿನದಿಂದಲೇ ಅವರೆ ಕಾಯಿ ಕಟಾವು ಪ್ರತಿ ಕೆ.ಜಿ.ಗೆ ₹ 50ರಿಂದ ₹ 60ಕ್ಕೆ ಮಾರಾಟ ಕಡಿಮೆ ಬಂಡವಾಳ, ಹೆಚ್ಚಿನ ಲಾಭ</blockquote>.<p>'ರೈತರು ಪ್ರತಿ ವರ್ಷ ಒಂದೇ ಬೆಳೆ ಬೆಳೆಯುವ ಬದಲು ಬೆಳೆ ಪರಿವರ್ತನೆ ಪದ್ಧತಿ ಅನುಸರಿಸುವುದರಿಂದ ಅಧಿಕ ಲಾಭ ಗಳಿಸಬಹುದು’ ಎಂದು ರೈತ ಹೇಳುತ್ತಾರೆ.</p>.<div><blockquote>ತೋಟಗಾರಿಕೆ ಬೆಳೆಗಳು ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೋಡುತ್ತವೆ. ಹೀಗಾಗಿ ರೈತರು ಬೇರೆ ಬೇರೆ ವಿಧದ ತೋಟಗಾರಿಕೆ ಬೆಳೆ ಬೆಳೆದು ಹೆಚ್ಚಿನ ಲಾಭ ಪಡೆದುಕೋಳ್ಳಬೇಕು</blockquote><span class="attribution">- ಅಭಿಮನ್ಯು ಪಾಟೀಲ ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ</strong>: ಹೋಬಳಿಯ ಡಾವರಗಾಂವ್ ಗ್ರಾಮದ ರೈತ ಅಭಿಮನ್ಯು ಪಾಟೀಲ ತಮ್ಮ ಒಂದು ಎಕರೆ ಪ್ರದೇಶದಲ್ಲಿ ಬೆಳೆದ ಅವರೆ ಬೆಳೆ ಹೆಚ್ಚಿನ ಆದಾಯ ತಂದುಕೊಡುವುದರೊಂದಿಗೆ ಹುರುಳಿಕಾಯ ಬೆಳೆಯಿಂದ ಆದ ನಷ್ಟವನ್ನು ಸರಿದೂಗಿಸಿದೆ.</p>.<p>ಸದ್ಯ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿ ಬೆಲೆಗಳು ಗಗನಕ್ಕೇರಿವೆ. ಅವುಗಳ ಸಾಲಿನಲ್ಲಿ ಅವರೆಯೂ ಒಂದಾಗಿದೆ. ಬಿನ್ನಿಸ್ ಬೆಳೆಯಿಂದ ಆದ ನಷ್ಟದಲ್ಲಿರುವಾಗ ಅವರೆ ಕಡಿಮೆ ಸಮಯದಲ್ಲಿ ಹೆಚ್ಚಿನ ಆದಾಯ ತಂದುಕೊಟ್ಟಿದೆ' ಎಂದು ರೈತ ಸಂತಸ ವ್ಯಕ್ತಪಡಿಸುತ್ತಾರೆ.</p>.<p>‘ಬಿತ್ತನೆ ಮಾಡಿದ 60 ರಿಂದ 70 ದಿನಗಳಲ್ಲಿ ಅವರೆಕಾಯಿ ಕಟಾವಿಗೆ ಬರುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಅವರೆ ಪ್ರತಿ ಕ್ವಿಂಟಾಲ್ಗೆ ₹5 ರಿಂದ ₹6 ಸಾವಿರಕ್ಕೆ ಮಾರಾಟ ಆಗುತ್ತಿದೆ. ಬೆಳೆಯೂ ಹುಲುಸಾಗಿ ಬೆಳೆದಿದ್ದು ಪ್ರತಿ ದಿನಕ್ಕೆ ಒಂದು ಕ್ವಿಂಟಾಲ್ನಂತೆ ಇಳುವರಿ ಬರುತ್ತಿದೆ' ಎನ್ನುತ್ತಾರೆ ರೈತ ಅಭಿಮನ್ಯು ಪಾಟೀಲ.</p>.<p>‘ಅವರೆಯನ್ನು ಹೊಲ ಹದ ಮಾಡಿ 2ರಿಂದ 4 ಅಡಿ ಅಂತರದಲ್ಲಿ ಬಿತ್ತನೆ ಮಾಡಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ, ಔಷಧಿ ಸಿಂಪಡಣೆ ಸೇರಿದಂತೆ ಇನ್ನಿತರ ಖರ್ಚು ಸೇರಿ ₹30 ಸಾವಿರದವರೆಗೆ ಆಗಿದೆ. ಅದಕ್ಕೆ ತಕ್ಕಂತೆ ದುಪ್ಪಟ್ಟು ಪ್ರಮಾಣದಲ್ಲಿ ಆದಾಯ ಲಭಿಸುತ್ತಿದೆ' ಎಂದು ತಿಳಿಸುತ್ತಾರೆ.</p>.<p>ಸಾಮಾನ್ಯವಾಗಿ ಅವರೆಕಾಯಿ ಬೆಳೆಗೆ ಕೀಟಬಾಧೆ ಸಮಸ್ಯೆ ನಿರಂತರ ಕಾಡುತ್ತದೆ. ಇದರಿಂದ ರೈತರು ಎದೆಗುಂದದೆ ಒಂದು ಲೀಟರ್ ನೀರಿಗೆ ಅರ್ಧ ಎಂ.ಎಲ್ ಫೇಮ್ ಮಿಶ್ರಣವನ್ನು ಸೇರಿಸಿ ಸಿಂಪಡಿಸಬೇಕು. ಅಥವಾ 1 ಲೀಟರ್ ನೀರಿಗೆ ಅರ್ಧ ಗ್ರಾಂ ಪ್ರೋಕ್ಲೆಮ್ ಬೆರೆಸಿ ಸಿಂಪಡಿಸಬೇಕು. ಇದರಿಂದ ಕೀಟಗಳು ನಿಯಂತ್ರಣಕ್ಕೆ ಬರುತ್ತವೆ' ಎಂದು ತೋಟಗಾರಿಕಾ ವಿಜ್ಞಾನಿ ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ತಿಳಿಸುತ್ತಾರೆ.</p>.<blockquote>65 ರಿಂದ70 ದಿನದಿಂದಲೇ ಅವರೆ ಕಾಯಿ ಕಟಾವು ಪ್ರತಿ ಕೆ.ಜಿ.ಗೆ ₹ 50ರಿಂದ ₹ 60ಕ್ಕೆ ಮಾರಾಟ ಕಡಿಮೆ ಬಂಡವಾಳ, ಹೆಚ್ಚಿನ ಲಾಭ</blockquote>.<p>'ರೈತರು ಪ್ರತಿ ವರ್ಷ ಒಂದೇ ಬೆಳೆ ಬೆಳೆಯುವ ಬದಲು ಬೆಳೆ ಪರಿವರ್ತನೆ ಪದ್ಧತಿ ಅನುಸರಿಸುವುದರಿಂದ ಅಧಿಕ ಲಾಭ ಗಳಿಸಬಹುದು’ ಎಂದು ರೈತ ಹೇಳುತ್ತಾರೆ.</p>.<div><blockquote>ತೋಟಗಾರಿಕೆ ಬೆಳೆಗಳು ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೋಡುತ್ತವೆ. ಹೀಗಾಗಿ ರೈತರು ಬೇರೆ ಬೇರೆ ವಿಧದ ತೋಟಗಾರಿಕೆ ಬೆಳೆ ಬೆಳೆದು ಹೆಚ್ಚಿನ ಲಾಭ ಪಡೆದುಕೋಳ್ಳಬೇಕು</blockquote><span class="attribution">- ಅಭಿಮನ್ಯು ಪಾಟೀಲ ರೈತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>