<p><strong>ಬಸವಕಲ್ಯಾಣ:</strong> ತಾಲ್ಲೂಕಿನ ಹಾರಕೂಡ ಹಿರೇಮಠದಲ್ಲಿ ಸೋಮವಾರ ಡೊಂಗರಗಾಂವದ ಮತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನದಿಂದ ನಡೆದ ಕಾರ್ಯಕ್ರಮದಲ್ಲಿ ಚನ್ನವೀರ ಶಿವಾಚಾರ್ಯರು, ಕಲಬುರಗಿಯ ದಾಕ್ಷಾಯಣಿ ಅಪ್ಪ ಹಾಗೂ ಬಬಲಾದ ಗುರುಪಾದಲಿಂಗ ಶಿವಾಚಾರ್ಯರಿಗೆ ಹಾಗೂ ಇತರೆ ಸಾಧಕರಿಗೆ ಅವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಬಳಿಕ ದಾಕ್ಷಾಯಣಿ ಅಪ್ಪ ಅವರು ಮಾತನಾಡಿ, ‘ತಾಯಿಗೆ ಸಮಾಜದಲ್ಲಿ ದೊಡ್ಡ ಗೌರವದ ಸ್ಥಾನವಿದೆ. ಕುಟುಂಬ ಮತ್ತು ಸಮಾಜದ ಬೆಳವಣಿಗೆಯಲ್ಲೂ ಅವರ ಪಾತ್ರ ಹಿರಿದು. ಆದ್ದರಿಂದ ಅವ್ವ ಹೆಸರಲ್ಲಿ ಪ್ರಶಸ್ತಿ ನೀಡುತ್ತಿರುವುದು ಪ್ರೇರಣೆ ನೀಡುವ ಕಾರ್ಯ’ ಎಂದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಶರಣಬಸಪ್ಪ ವಡ್ಡನಕೇರಿ, ಅಪ್ಪಾರಾವ ಅಕ್ಕೋಣಿ, ಬಸವರಾಜ ಕೊನೆಕ್ ಮಾತನಾಡಿದರು. ಸಾಹಿತಿ ವಿ.ಜಿ. ಪೂಜಾರ, ಶಿವಕುಮಾರ ಪಸಾರ, ಉದ್ಯಮಿ ಶರಣಮ್ಮ ಪಾಟೀಲ, ಗೋರೂರು ಪಂಕಜಾ ಅವರಿಗೂ ಅವ್ವ ಪ್ರಶಸ್ತಿ ನೀಡಲಾಯಿತು.</p>.<p>ಶಾಸಕ ಶರಣು ಸಲಗರ ಉದ್ಘಾಟಿಸಿದರು. ಮಲ್ಲಿಕಾರ್ಜುನ ಪಾಲಾಮೂರ, ಮೇಘರಾಜ ನಾಗರಾಳೆ, ಮಲ್ಲಿನಾಥ ಹಿರೇಮಠ, ಅಲ್ಲಮಪ್ರಭು ದೇಶಮುಖ ಉಪಸ್ಥಿತರಿದ್ದರು.<br /> ಕಾರ್ತಿಕಸ್ವಾಮಿ ಯಲ್ಲದಗುಂಡಿ, ಶರಣಪ್ಪ ಜಮಾದಾರ ಸುಂಠಾಣ ಸಂಗೀತ ಪ್ರಸ್ತುತಪಡಿಸಿದರು. ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ತಾಲ್ಲೂಕಿನ ಹಾರಕೂಡ ಹಿರೇಮಠದಲ್ಲಿ ಸೋಮವಾರ ಡೊಂಗರಗಾಂವದ ಮತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನದಿಂದ ನಡೆದ ಕಾರ್ಯಕ್ರಮದಲ್ಲಿ ಚನ್ನವೀರ ಶಿವಾಚಾರ್ಯರು, ಕಲಬುರಗಿಯ ದಾಕ್ಷಾಯಣಿ ಅಪ್ಪ ಹಾಗೂ ಬಬಲಾದ ಗುರುಪಾದಲಿಂಗ ಶಿವಾಚಾರ್ಯರಿಗೆ ಹಾಗೂ ಇತರೆ ಸಾಧಕರಿಗೆ ಅವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಬಳಿಕ ದಾಕ್ಷಾಯಣಿ ಅಪ್ಪ ಅವರು ಮಾತನಾಡಿ, ‘ತಾಯಿಗೆ ಸಮಾಜದಲ್ಲಿ ದೊಡ್ಡ ಗೌರವದ ಸ್ಥಾನವಿದೆ. ಕುಟುಂಬ ಮತ್ತು ಸಮಾಜದ ಬೆಳವಣಿಗೆಯಲ್ಲೂ ಅವರ ಪಾತ್ರ ಹಿರಿದು. ಆದ್ದರಿಂದ ಅವ್ವ ಹೆಸರಲ್ಲಿ ಪ್ರಶಸ್ತಿ ನೀಡುತ್ತಿರುವುದು ಪ್ರೇರಣೆ ನೀಡುವ ಕಾರ್ಯ’ ಎಂದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಶರಣಬಸಪ್ಪ ವಡ್ಡನಕೇರಿ, ಅಪ್ಪಾರಾವ ಅಕ್ಕೋಣಿ, ಬಸವರಾಜ ಕೊನೆಕ್ ಮಾತನಾಡಿದರು. ಸಾಹಿತಿ ವಿ.ಜಿ. ಪೂಜಾರ, ಶಿವಕುಮಾರ ಪಸಾರ, ಉದ್ಯಮಿ ಶರಣಮ್ಮ ಪಾಟೀಲ, ಗೋರೂರು ಪಂಕಜಾ ಅವರಿಗೂ ಅವ್ವ ಪ್ರಶಸ್ತಿ ನೀಡಲಾಯಿತು.</p>.<p>ಶಾಸಕ ಶರಣು ಸಲಗರ ಉದ್ಘಾಟಿಸಿದರು. ಮಲ್ಲಿಕಾರ್ಜುನ ಪಾಲಾಮೂರ, ಮೇಘರಾಜ ನಾಗರಾಳೆ, ಮಲ್ಲಿನಾಥ ಹಿರೇಮಠ, ಅಲ್ಲಮಪ್ರಭು ದೇಶಮುಖ ಉಪಸ್ಥಿತರಿದ್ದರು.<br /> ಕಾರ್ತಿಕಸ್ವಾಮಿ ಯಲ್ಲದಗುಂಡಿ, ಶರಣಪ್ಪ ಜಮಾದಾರ ಸುಂಠಾಣ ಸಂಗೀತ ಪ್ರಸ್ತುತಪಡಿಸಿದರು. ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>