ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಮಾತನಾಡಿ, ‘ಧ್ವನಿ ಇಲ್ಲದವರಿಗೆ ಧ್ವನಿ ನೀಡಿದಂತಹ, ಶೋಷಿತರಿಗೆ ಶಕ್ತಿ ತುಂಬಿದ ಅರಸು ಅವರನ್ನು ನಾವು ಮರೆಯುತ್ತಿದ್ದೇವೆ. ರೈತಾಪಿ ಜನ ಅವರನ್ನು ಮರೆಯುವುದರಲ್ಲಿ ಆಶ್ಚರ್ಯ ಇಲ್ಲ, ಜೀವನದ ನೋವು–ನಲಿವು, ಜಂಜಡದಲ್ಲಿ ಅವರು ಮರೆಯಬಹುದು. ಆದರೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಇಲ್ಲಿ ಪುತ್ಥಳಿ ನಿರ್ಮಿಸುವ ಕೆಲಸ ಮಾಡಬೇಕಾಗಿತ್ತು. ಅದನ್ನು ಮಾಡಿಲ್ಲ. ಅದು ಈ ರಾಜ್ಯದ ದುರಂತ’ ಎಂದರು.