ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲೆಮಾರಿ ಕಾಲೊನಿಯಲ್ಲಿ ಜಾಗೃತಿ ಕಾರ್ಯಕ್ರಮ

Published 15 ಡಿಸೆಂಬರ್ 2023, 16:22 IST
Last Updated 15 ಡಿಸೆಂಬರ್ 2023, 16:22 IST
ಅಕ್ಷರ ಗಾತ್ರ

ಬೀದರ್‌: ಇಲ್ಲಿನ ಆಟೊ ನಗರ ಸಮೀಪದ ಅಲೆಮಾರಿ ಕಾಲೊನಿಯಲ್ಲಿ ಶುಕ್ರವಾರ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

‘ಎದ್ದೇಳು ಕರ್ನಾಟಕ’ ಸಂಘಟನೆ, ವಿಶ್ವಕ್ರಾಂತಿ ದಿವ್ಯ ಪೀಠ, ಅಲೆಮಾರಿ ಜನಾಂಗ ಅಭಿವೃದ್ಧಿ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಸುಮಾರು 25 ವರ್ಷಗಳಿಂದ ಅಲೆಮಾರಿ ಜನಾಂಗದವರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಎಲ್ಲರಿಗೂ ಸರ್ಕಾರದ ಸೌಲಭ್ಯಗಳು ಸಿಗಬೇಕೆಂದರೆ ಜಾತಿ ಪ್ರಮಾಣ ಪತ್ರ, ಆಧಾರ, ಮತದಾರರ ಗುರುತಿನ ಚೀಟಿ, ರೇಷನ್‌ ಕಾರ್ಡ್‌ ಮಾಡಿಸಿಕೊಳ್ಳಬೇಕು. ಮನೆ ನಿರ್ಮಾಣ, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯವೂ ಇದೆ ಎಂದು ಹಿರಿಯ ವಕೀಳ ಜೈರಾಜ ಬುಕ್ಕಾ ತಿಳಿಸಿದರು.

ಅಲೆಮಾರಿಗಳಾದ ನೀವು ಚಳಿ, ಮಳೆ, ಸುಡುವ ಬಿಸಿಲಿನಲ್ಲಿ ಗುಡಿಸಲುಗಳಲ್ಲಿ ಬದುಕುತ್ತಿದ್ದೀರಿ. ನಿಮ್ಮ ಹಕ್ಕಿಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ನಡೆಸಬಹುದಾಗಿದೆ ಎಂದು ಹೇಳಿದರು.

ವಿಶ್ವಕ್ರಾಂತಿ ದಿವ್ಯ ಪೀಠದ ಓಂಪ್ರಕಾಶ ರೊಟ್ಟೆ ಮಾತನಾಡಿ, ಅಲೆಮಾರಿಗಳ ಕಲ್ಯಾಣಕ್ಕಾಗಿ ಅಲೆಮಾರಿ ಜನಾಂಗ ಅಭಿವೃದ್ಧಿ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಗಳು ಇವೆ. ಅರ್ಜಿ ಸಲ್ಲಿಸಿ, ಹಕ್ಕುಗಳನ್ನು ಪಡೆಯಬೇಕೆಂದು ತಿಳಿಸಿದರು.

‘ಎದ್ದೇಳು ಕರ್ನಾಟಕ‘ ಸಂಘಟನೆಯ ಜಿಲ್ಲಾ ಸಹ ಸಂಚಾಲಕ ಜಗದೀಶ ಬಿರಾದಾರ ಮಾತನಾಡಿ, ಅಲೆಮಾರಿ ಜನಾಂಗಕ್ಕೆ ನ್ಯಾಯಯುತವಾದ ಹಕ್ಕುಗಳನ್ನು ಕೊಡಿಸಲು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು.

ಇದೇ ವೇಳೆ  ಅಲೆಮಾರಿ ಜನಾಂಗದವರಿಗೆ ಹಣ್ಣು, ಹಾಲು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT