ಆದರೆ ವಿರೋಧಿಗಳು ದೇಶಕ್ಕೆ ಕಾಂಗ್ರೆಸ್ ನ ಕೊಡುಗೆ ಏನೆಂದು ಪ್ರಶ್ನಿಸಿಸುತ್ತಾರೆ. ಹಾಗಾಗಿ ಯುವ ಸಮುದಾಯ ಇತಿಹಾಸ, ಪರಂಪರೆ, ಚರಿತ್ರೆಯನ್ನು ತಿಳಿದು ಕೊಳ್ಳಬೇಕು ಎಂದರು. ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದೆ. ಜೀವನ ಅವಶ್ಯಕ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಬಡ ಜನರ ಬದುಕು ದುರ್ಬಲವಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಎಲ್ಲವನ್ನೂ ಸುಧಾರಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು. ಕಲಬುರಗಿಯ ಶರಣು ಮೋದಿ, ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ, ತಾಲ್ಲೂಕು ಅಧ್ಯಕ್ಷ ಹಣಮಂತರಾವ್ ಚವ್ಹಾಣ, ಅಶೋಕ ಸೋನಜಿ, ಮಡಿವಾಳಪ್ಪ ಮಂಗಲಗಿ, ಅಮೃತರಾವ್ ಚಿಮಕೋಡ್, ಶಿವರಾಜ ಹಾಸನಕರ್ ಇದ್ದರು.