<p><strong>ಕಮಲನಗರ:</strong> ‘ವಿದ್ಯಾರ್ಥಿಗಳು ನಿರಂತರ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಉತ್ತಮ ಫಲಿತಾಂಶ ಬರುವ ಮೂಲಕ ಯಶಸ್ಸು ಲಭಿಸುತ್ತದೆ’ ಎಂದು ಪಾಲಕ ಪ್ರತಿನಿಧಿ ಬಾಬುರಾವ ಪಾಟೀಲ್ ಹೇಳಿದರು.</p>.<p>ಪಟ್ಟಣದ ಶಾಂತಿವರ್ಧಕ ಪಪೂ ಕಾಲೇಜಿನ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ರೂಢಿಸಿಕೊಳ್ಳಬೇಕು. ಮೊಬೈಲ್, ವಾಟ್ಸ್ಆಪ್, ಫೇಸಬುಕ್ ಸಂಸ್ಕೃತಿಯಿಂದ ಹೊರಬಂದು ತಮ್ಮ ಪರಿಪೂರ್ಣ ಸಮಯವನ್ನು ಕಲಿಕಾ ಸಾಮರ್ಥ್ಯದ ಹೆಚ್ಚಳಕ್ಕೆ ಮೀಸಲಿಡಬೇಕು’ ಎಂದು ಸಲಹೆ ನೀಡಿದರು.</p>.<p>ಮುಖಂಡ ಪ್ರವೀಣ ಪಾಟೀಲ್ ಮಾತನಾಡಿ, ‘ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದು ಅತ್ಯಗತ್ಯ. ವಿದ್ಯಾರ್ಥಿಗಳು ಸೌಲಭ್ಯಗಳ ಸದುಪಯೋಗ ಪಡೆದು ಸಾಧನೆಗೈಯಬೇಕು’ ಎಂದರು.</p>.<p>ಪ್ರಾಚಾರ್ಯ ಶಿವಾಜಿ.ಆರ್.ಎಚ್ ಮಾತನಾಡಿದರು. ಸಿದ್ಧರಾಮೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ರಮೇಶ ಚವ್ಹಾಣ, ಐಟಿಐ ಕಾಲೇಜಿನ ಪ್ರಾಚಾರ್ಯ ಯುವರಾಜ ಬಿರಾದಾರ, ಮುಖ್ಯಶಿಕ್ಷಕ ಜ್ಞಾನೇಶ್ವರ ಚ್ಯಾಂಡೇಶ್ವರೆ, ರಾಮೇಶ್ವರ ಬಿರಾದಾರ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.</p>.<p>ಓಂಕಾಂತ ಸೂರ್ಯವಂಶಿ ಸ್ವಾಗತಿಸಿದರು. ವಿಜಯಕುಮಾರ ವಾರದ ಹಾಗೂ ಕಾದಂಬಿನಿ ಮೇತ್ರೆ ನಿರೂಪಿಸಿದರು. ಕಾಳಿದಾಸ ಬೌದ್ಧೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ‘ವಿದ್ಯಾರ್ಥಿಗಳು ನಿರಂತರ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಉತ್ತಮ ಫಲಿತಾಂಶ ಬರುವ ಮೂಲಕ ಯಶಸ್ಸು ಲಭಿಸುತ್ತದೆ’ ಎಂದು ಪಾಲಕ ಪ್ರತಿನಿಧಿ ಬಾಬುರಾವ ಪಾಟೀಲ್ ಹೇಳಿದರು.</p>.<p>ಪಟ್ಟಣದ ಶಾಂತಿವರ್ಧಕ ಪಪೂ ಕಾಲೇಜಿನ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ರೂಢಿಸಿಕೊಳ್ಳಬೇಕು. ಮೊಬೈಲ್, ವಾಟ್ಸ್ಆಪ್, ಫೇಸಬುಕ್ ಸಂಸ್ಕೃತಿಯಿಂದ ಹೊರಬಂದು ತಮ್ಮ ಪರಿಪೂರ್ಣ ಸಮಯವನ್ನು ಕಲಿಕಾ ಸಾಮರ್ಥ್ಯದ ಹೆಚ್ಚಳಕ್ಕೆ ಮೀಸಲಿಡಬೇಕು’ ಎಂದು ಸಲಹೆ ನೀಡಿದರು.</p>.<p>ಮುಖಂಡ ಪ್ರವೀಣ ಪಾಟೀಲ್ ಮಾತನಾಡಿ, ‘ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದು ಅತ್ಯಗತ್ಯ. ವಿದ್ಯಾರ್ಥಿಗಳು ಸೌಲಭ್ಯಗಳ ಸದುಪಯೋಗ ಪಡೆದು ಸಾಧನೆಗೈಯಬೇಕು’ ಎಂದರು.</p>.<p>ಪ್ರಾಚಾರ್ಯ ಶಿವಾಜಿ.ಆರ್.ಎಚ್ ಮಾತನಾಡಿದರು. ಸಿದ್ಧರಾಮೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ರಮೇಶ ಚವ್ಹಾಣ, ಐಟಿಐ ಕಾಲೇಜಿನ ಪ್ರಾಚಾರ್ಯ ಯುವರಾಜ ಬಿರಾದಾರ, ಮುಖ್ಯಶಿಕ್ಷಕ ಜ್ಞಾನೇಶ್ವರ ಚ್ಯಾಂಡೇಶ್ವರೆ, ರಾಮೇಶ್ವರ ಬಿರಾದಾರ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.</p>.<p>ಓಂಕಾಂತ ಸೂರ್ಯವಂಶಿ ಸ್ವಾಗತಿಸಿದರು. ವಿಜಯಕುಮಾರ ವಾರದ ಹಾಗೂ ಕಾದಂಬಿನಿ ಮೇತ್ರೆ ನಿರೂಪಿಸಿದರು. ಕಾಳಿದಾಸ ಬೌದ್ಧೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>