<p><strong>ಬೀದರ್</strong>: ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ವಿಳಂಬ ಮಾಡುವ ಮೂಲಕ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ’ ಎಂದು ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಆರೋಪಿಸಿದರು.</p>.<p>ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಜಿಲೆಲಯ ವಿವಿಧ ದಲಿತ ಸಂಘಟನೆಗಳು ಇಲ್ಲಿಯ ಕನ್ನಡ ಸಾಹಿತ್ಯ ಸಂಘದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರ ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಇವೆ. ಉದ್ಯೋಗದಲ್ಲಿ ಮೀಸಲಾತಿ ನಿಯಮಗಳ ಜಾರಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಅನೇಕ ಜನ ವಿದ್ಯಾವಂತ ಯುವಕರು ವಯೋಮಿತಿ ಮೀರಿ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಆಡಳಿತಾರೂಢ ಪಕ್ಷದ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಅಹಿಂದ ಸಮುದಾಯ ಹಾಗೂ ದಲಿತ ಸಂಘಟನೆಗಳು ಒಂದಾಗಿ ಈಗಿನ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯುವ ಸಂಕಲ್ಪ ಮಾಡಬೇಕು’ ಎಂದರು.</p>.<p>ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಮನ್ನಾನ್ ಸೇಠ್ ಅಧ್ಯಕ್ಷತೆ ವಹಿಸಿದ್ದರು. ಅನಿಲಕುಮಾರ ಬೆಲ್ದಾರ್ ಮಾತನಾಡಿದರು. ಅಮೃತರಾವ್ ಚಿಮಕೋಡೆ, ಬಸವರಾಜ ಮಾಳಗೆ, ರಮೇಶ ಡಾಕುಳಗಿ, ಪ್ರದೀಪ ಜಂಜಿರೆ, ಜಾನ್ ವೆಸ್ಲಿ ಹಾಗೂ ಸೋಮನಾಥ ಕಂದಗೂಳೆ ಇದ್ದರು.</p>.<p>ದಲಿತ ಸಂಘಟನೆಯ ಮುಖಂಡರಾದ ಶ್ರೀಪತರಾವ್ ದೀನೆ, ಅಂಬಾದಾಸ್ ಗಾಯಕವಾಡ, ರಾಜಕುಮಾರ ಬನ್ನೇರ್, ಶಿವಕುಮಾರ ನೀಲಿಕಟ್ಟಿ, ಎಂ.ಎಸ್. ಕಟಗಿ, ಮಹಾದೇವ ಕಾಂಬಳೆ, ವಿಠ್ಠಲದಾಸ ಪ್ಯಾಗೆ ಹಾಗೂ ಕಾಶೀನಾಥ ಚೆಲವಾ ಪಾಲ್ಗೊಂಡಿದ್ದರು. ಬಾಬುರಾವ್ ಪಾಸ್ವಾನ್ ಸ್ವಾಗತಿಸಿದರು. ಪ್ರದೀಪ ನಾಟೇಕರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ವಿಳಂಬ ಮಾಡುವ ಮೂಲಕ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ’ ಎಂದು ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಆರೋಪಿಸಿದರು.</p>.<p>ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಜಿಲೆಲಯ ವಿವಿಧ ದಲಿತ ಸಂಘಟನೆಗಳು ಇಲ್ಲಿಯ ಕನ್ನಡ ಸಾಹಿತ್ಯ ಸಂಘದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರ ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಇವೆ. ಉದ್ಯೋಗದಲ್ಲಿ ಮೀಸಲಾತಿ ನಿಯಮಗಳ ಜಾರಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಅನೇಕ ಜನ ವಿದ್ಯಾವಂತ ಯುವಕರು ವಯೋಮಿತಿ ಮೀರಿ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಆಡಳಿತಾರೂಢ ಪಕ್ಷದ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಅಹಿಂದ ಸಮುದಾಯ ಹಾಗೂ ದಲಿತ ಸಂಘಟನೆಗಳು ಒಂದಾಗಿ ಈಗಿನ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯುವ ಸಂಕಲ್ಪ ಮಾಡಬೇಕು’ ಎಂದರು.</p>.<p>ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಮನ್ನಾನ್ ಸೇಠ್ ಅಧ್ಯಕ್ಷತೆ ವಹಿಸಿದ್ದರು. ಅನಿಲಕುಮಾರ ಬೆಲ್ದಾರ್ ಮಾತನಾಡಿದರು. ಅಮೃತರಾವ್ ಚಿಮಕೋಡೆ, ಬಸವರಾಜ ಮಾಳಗೆ, ರಮೇಶ ಡಾಕುಳಗಿ, ಪ್ರದೀಪ ಜಂಜಿರೆ, ಜಾನ್ ವೆಸ್ಲಿ ಹಾಗೂ ಸೋಮನಾಥ ಕಂದಗೂಳೆ ಇದ್ದರು.</p>.<p>ದಲಿತ ಸಂಘಟನೆಯ ಮುಖಂಡರಾದ ಶ್ರೀಪತರಾವ್ ದೀನೆ, ಅಂಬಾದಾಸ್ ಗಾಯಕವಾಡ, ರಾಜಕುಮಾರ ಬನ್ನೇರ್, ಶಿವಕುಮಾರ ನೀಲಿಕಟ್ಟಿ, ಎಂ.ಎಸ್. ಕಟಗಿ, ಮಹಾದೇವ ಕಾಂಬಳೆ, ವಿಠ್ಠಲದಾಸ ಪ್ಯಾಗೆ ಹಾಗೂ ಕಾಶೀನಾಥ ಚೆಲವಾ ಪಾಲ್ಗೊಂಡಿದ್ದರು. ಬಾಬುರಾವ್ ಪಾಸ್ವಾನ್ ಸ್ವಾಗತಿಸಿದರು. ಪ್ರದೀಪ ನಾಟೇಕರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>