<p><strong>ಬೀದರ್:</strong> ಪ್ರತಿ ಪಕ್ಷದವರು ಮಂಗಳವಾರ (ಡಿ.8) ಭಾರತ ಬಂದ್ ನಡೆಸಲು ಹೊರಟಿರುವುದು ನಾಚಿಕೆಗೇಡು ಸಂಗತಿಯಾಗಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಳೆದ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಮಸೂದೆಗಳು ಜಾರಿಗೆ ಬಂದ ಮೇಲೆ ಕಾಂಗ್ರೆಸ್ನವರು ಮುಗ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<p>60 ವರ್ಷಗಳ ಕಾಲ ದೇಶವನ್ನಾಳಿದರೂ ರೈತರು, ಬಡವರು, ದೀನ ದಲಿತರನ್ನು ಅಭಿವೃದ್ಧಿಗೊಳಿಸದೆ ಕತ್ತಲಲ್ಲಿ ಇಟ್ಟಿದ್ದಾರೆ. ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮಸೂದೆಯಲ್ಲಿ ಯಾವುದೇ ಮೋಸ ಇಲ್ಲ. ರೈತರಿಗೆ ಅನ್ಯಾಯ ಆಗುವುದಿಲ್ಲ. ರೈತರು ಭಾರತ ಬಂದ್ನಲ್ಲಿ ಪಾಲ್ಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಪ್ರತಿ ಪಕ್ಷದವರು ಮಂಗಳವಾರ (ಡಿ.8) ಭಾರತ ಬಂದ್ ನಡೆಸಲು ಹೊರಟಿರುವುದು ನಾಚಿಕೆಗೇಡು ಸಂಗತಿಯಾಗಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಳೆದ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಮಸೂದೆಗಳು ಜಾರಿಗೆ ಬಂದ ಮೇಲೆ ಕಾಂಗ್ರೆಸ್ನವರು ಮುಗ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<p>60 ವರ್ಷಗಳ ಕಾಲ ದೇಶವನ್ನಾಳಿದರೂ ರೈತರು, ಬಡವರು, ದೀನ ದಲಿತರನ್ನು ಅಭಿವೃದ್ಧಿಗೊಳಿಸದೆ ಕತ್ತಲಲ್ಲಿ ಇಟ್ಟಿದ್ದಾರೆ. ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮಸೂದೆಯಲ್ಲಿ ಯಾವುದೇ ಮೋಸ ಇಲ್ಲ. ರೈತರಿಗೆ ಅನ್ಯಾಯ ಆಗುವುದಿಲ್ಲ. ರೈತರು ಭಾರತ ಬಂದ್ನಲ್ಲಿ ಪಾಲ್ಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>