<p><strong>ಬೀದರ್:</strong> ಬಾಂಗ್ಲಾ ದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.</p><p>ಹಿಂದೂಗಳಿಗೆ ರಕ್ಷಣೆ ಕೊಡದ ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿದರು. ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ಅತ್ಯಾಚಾರ ಸಹಿಸುವುದಿಲ್ಲ. ಸಾರ್ವಜನಿಕವಾಗಿ ಹಿಂದೂ ಯುವಕನ ಹತ್ಯೆ ಮಾಡಿರುವುದು ತೀವ್ರ ಖಂಡನಾರ್ಹ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವೀರಶೆಟ್ಟಿ ಖ್ಯಾಮ ಹೇಳಿದರು.</p><p>ಕೇಂದ್ರ ಸರ್ಕಾರ ತಕ್ಷಣವೇ ಬಾಂಗ್ಲಾದೇಶದಲ್ಲಿರುವ ಹಿಂದೂಗಳ ರಕ್ಷಣೆಯನ್ನು ಖಾತ್ರಿ ಪಡಿಸಬೇಕು ಎಂದು ಒತ್ತಾಯಿಸಿದರು.</p><p>ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ, ಬಸವರಾಜ ಯದಲಾಪೂರ, ಭೀಮಣ್ಣ ಸರೋಳ್ಳಿ, ಸಂಗು ಪಾಟೀಲ್, ದತ್ತಾತ್ರಿ ವಾಲ್ದೊಡ್ಡಿ, ಬೀರಪ್ಪ ಹಿಪ್ಪಳಗಾಂವ್, ಸಾಯಿ ಮೂಲಗೆ, ನಿಖಿಲ್, ಶಂಕರ್ ಖ್ಯಾಮ, ಸಂತೋಷ್ ಬಂಡೆ, ಸದಾನಂದ ಹುಮನಾಬಾದ್, ಅನಂತರೆಡ್ಡಿ, ರೋಹಿತ್ ಗುರೂಜಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬಾಂಗ್ಲಾ ದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.</p><p>ಹಿಂದೂಗಳಿಗೆ ರಕ್ಷಣೆ ಕೊಡದ ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿದರು. ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ಅತ್ಯಾಚಾರ ಸಹಿಸುವುದಿಲ್ಲ. ಸಾರ್ವಜನಿಕವಾಗಿ ಹಿಂದೂ ಯುವಕನ ಹತ್ಯೆ ಮಾಡಿರುವುದು ತೀವ್ರ ಖಂಡನಾರ್ಹ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವೀರಶೆಟ್ಟಿ ಖ್ಯಾಮ ಹೇಳಿದರು.</p><p>ಕೇಂದ್ರ ಸರ್ಕಾರ ತಕ್ಷಣವೇ ಬಾಂಗ್ಲಾದೇಶದಲ್ಲಿರುವ ಹಿಂದೂಗಳ ರಕ್ಷಣೆಯನ್ನು ಖಾತ್ರಿ ಪಡಿಸಬೇಕು ಎಂದು ಒತ್ತಾಯಿಸಿದರು.</p><p>ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ, ಬಸವರಾಜ ಯದಲಾಪೂರ, ಭೀಮಣ್ಣ ಸರೋಳ್ಳಿ, ಸಂಗು ಪಾಟೀಲ್, ದತ್ತಾತ್ರಿ ವಾಲ್ದೊಡ್ಡಿ, ಬೀರಪ್ಪ ಹಿಪ್ಪಳಗಾಂವ್, ಸಾಯಿ ಮೂಲಗೆ, ನಿಖಿಲ್, ಶಂಕರ್ ಖ್ಯಾಮ, ಸಂತೋಷ್ ಬಂಡೆ, ಸದಾನಂದ ಹುಮನಾಬಾದ್, ಅನಂತರೆಡ್ಡಿ, ರೋಹಿತ್ ಗುರೂಜಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>